ಅಕ್ರಮ ಮರಳು ದಂಧೆ ಮೇಲೆ ದಾಳಿ, ಯಾಂತ್ರಿಕೃತ ಬೋಟ್‌ ವಶ

KannadaprabhaNewsNetwork |  
Published : Feb 23, 2025, 12:34 AM IST
ಹೂವಿನಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿಯ ತುಂಗಭದ್ರ ನದಿಯಲ್ಲಿ ಮರಳು ಅಕ್ರಮ ದಂಧೆಗೆ ಬಳಕೆ ಮಾಡುತ್ತಿದ್ದ ಯಾಂತ್ರಕೃತ ಬೋಟ್‌ನ್ನು ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿರುವುದು. | Kannada Prabha

ಸಾರಾಂಶ

ಲಿಂಗನಾಯಕನಹಳ್ಳಿ ಮಠದ ಹಿಂಭಾಗದಲ್ಲಿನ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ದಂಧೆ

ಹೂವಿನಹಡಗಲಿ: ತಾಲೂಕಿನ ತುಂಗಭದ್ರಾ ನದಿ ತೀರದಲ್ಲಿ ನಡೆಯುತ್ತಿರುವ ಮರಳು ಅಕ್ರಮ ದಂಧೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿ ಯಾಂತ್ರಿಕೃತ ಬೋಟ್‌ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಲಿಂಗನಾಯಕನಹಳ್ಳಿ ಮಠದ ಹಿಂಭಾಗದಲ್ಲಿನ ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ದಂಧೆಗೆ ಬಳಕೆ ಮಾಡುತ್ತಿದ್ದ, ಯಾಂತ್ರಕೃತ ಬೋಟ್‌ನ್ನು ನೀರಿನಲ್ಲಿನ ಮರಳು ಎತ್ತಲು ಮರಳು ಅಕ್ರಮ ದಂಧೆಕೋರರು ತಂದಿದ್ದರು. ಆ ವೇಳೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮತ್ತು, ತಹಸೀಲ್ದಾರ್‌ ಹಾಗೂ ಪೊಲೀಸರು ದಾಳಿ ಮಾಡಿ ಬೋಟ್‌ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಹಿರೇಹಡಗಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿಯಲ್ಲಿ ತಹಸೀಲ್ದಾರ್‌ ಜಿ. ಸಂತೋಷಕುಮಾರ್‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಮಲ್ಲಯ್ಯ ಹಾಗೂ ಪೊಲೀಸ್‌ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ