ಕನ್ನಡಪ್ರಭ ವಾರ್ತೆ ತುಮಕೂರು
ಅವರು ತುಮಕೂರಿನ ಎಂ.ಜಿ. ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ತುಮಕೂರು- ರಾಯದುರ್ಗ ರೈಲ್ವೆ ಯೋಜನೆಯು ತುಮಕೂರು ಜಿಲ್ಲೆಯ 4 ತಾಲೂಕುಗಳ ಒಟ್ಟು 77 ಗ್ರಾಮಗಳ ಮೂಲಕ 104.02 ಕಿ.ಮೀ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದು, ಒಟ್ಟು ಅವಶ್ಯಕವಾದ 1369 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಈಗಾಗಲೇ ಶೇಕಡ 99.9ರಷ್ಟು ಜಮೀನನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಹಾಗೆಯೇ ತುಮಕೂರು- ದಾವಣಗೆರೆ ರೈಲ್ವೆ ಯೋಜನೆಯು ತುಮಕೂರು ಜಿಲ್ಲೆಯ 2 ತಾಲೂಕುಗಳ ಒಟ್ಟು 35 ಗ್ರಾಮಗಳ ಮೂಲಕ 58.69 ಕಿ.ಮೀ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದು, ಒಟ್ಟು ಅವಶ್ಯಕವಾದ 845 ಎಕರೆ ಜಮೀನಿನ ಪೈಕಿ ಈವರೆಗೂ 816 ಎಕರೆ ಅಂದರೆ ಶೇಕಡ 97ರಷ್ಟು ಜಮೀನನ್ನು ಭೂಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದರು.ಕುಡಿಯುವ ನೀರಿಗಾಗಿ ಕೈಗೆತ್ತಿಕೊಂಡಿರುವ ಬಹು ನಿರೀಕ್ಷಿತ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯು ಜಿಲ್ಲೆಯ 8 ತಾಲೂಕುಗಳಲ್ಲಿ ಒಟ್ಟು 197 ಗ್ರಾಮಗಳ ಮೂಲಕ 163 ಕಿ.ಮೀ. ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದು, ಅವಶ್ಯಕವಾದ 3,118 ಎಕರೆ ಜಮೀನಿನ ಪೈಕಿ ಶೇ.97ರಷ್ಟು ಭೂ ಸ್ವಾಧೀನಪಡಿಸಿಕೊಂಡು ಕೋರಿಕೆ ಸಂಸ್ಥೆಗೆ ಹಸ್ತಾಂತರಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಜಿಲ್ಲೆಯಲ್ಲಿ ಜೂನ್ ಮಾಹೆಯಿಂದ ಈವರೆಗೂ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ. ಜೂನ್ ಮಾಹೆಯಲ್ಲಿ ಶೇ.20 ರಷ್ಟು ಹಾಗೂ ಜುಲೈ ಮಾಹೆಯಲ್ಲಿ ಶೇ. 75ರಷ್ಟು ಮಳೆ ಕೊರತೆಯಾಗಿದೆ. ಸಮರ್ಪಕವಾಗಿ ಮಳೆಯಾಗದ ಕಾರಣ ಬೆಳೆಗಳು ರೈತರ ಕೈತಪ್ಪಿ ಹೋಗಿದ್ದು, ಜಿಲ್ಲೆಯಲ್ಲಿ ಬರದ ಛಾಯೆ ಎದುರಾಗಿದೆ ಎಂದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 3.11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಜಿಲ್ಲೆಯ 20185 ರೈತರಿಗೆ 7837೭ ಕ್ವಿಂಟಾಲ್ ಬಿತ್ತನೆ ಬೀಜವನ್ನು ವಿತರಿಸಲಾಗಿದೆ ಎಂದ ಅವರು, ತೋಟಗಾರಿಕೆ ಬೆಳೆಯನ್ನು ಬೆಳೆಯುವ ರೈತರ ಸರ್ವತೋಮುಖ ಅಭಿವೃದ್ಧಿಗೆ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ, ಹನಿ ನೀರಾವರಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ರಾಷ್ಟ್ರೀಯ ಕೃಷಿ ವಿಕಾಸ, ಜೇನು ಸಾಕಾಣಿಕೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆಗಳಡಿ ₹29 ಕೋಟಿ ಅಂದಾಜು ವೆಚ್ಚದಲ್ಲಿ 6862 ಫಲಾನುಭವಿಗಳಿಗೆ ಸಹಾಯಧನ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹಕ್ಕುಪತ್ರ ವಿತರಣಾ ಅಭಿಯಾನದಡಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಗ್ರಾಮವಾಗಿ ರಚಿಸಲು ಈವರೆಗೂ ಗುರುತಿಸಲಾಗಿರುವ ದಾಖಲೆ ರಹಿತ 1312 ಜನವಸತಿ ಪ್ರದೇಶಗಳ ಪೈಕಿ ಈವರೆಗೂ ಸರ್ಕಾರದಿಂದ 945 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ ಹಾಗೂ 848 ಗ್ರಾಮಗಳಿಗೆ ಅಂತಿಮ ಅಧಿಸೂಚನೆಯಾಗಿದೆ. ಉಳಿದ ಗ್ರಾಮಗಳು ವಿವಿಧ ಹಂತಗಳಲ್ಲಿ ಅಧಿಸೂಚನೆ ಹೊರಡಿಸಲು ಬಾಕಿ ಇದ್ದು, ಕಾರ್ಯ ಪ್ರಗತಿಯಲ್ಲಿದೆ ಎಂದರು.
ಜಿಲ್ಲೆ ಹಾಗೂ ನಾಡಿನ ಸಮಸ್ತ ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಬಾರಿಯೂ ದಸರಾ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಸುರೇಶಗೌಡ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಎಸ್ಪಿ ಅಶೋಕ್ ಕುಮಾರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.