ಹುಬ್ಬಳ್ಳಿ:
ಅವರು ಮಂಗಳವಾರ ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವ್ಯಾಪ್ತಿಯ ₹ 5142 ಕೋಟಿ ವೆಚ್ಚದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರೈಲು ನಿಲ್ದಾಣದಲ್ಲಿ ಆರಂಭಿಸಿದ ಜನೌಷಧಿ ಮಳಿಗೆ ಉದ್ಘಾಟಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಒಂದೇ ದಿನ ₹ 85 ಸಾವಿರ ಕೋಟಿ ವೆಚ್ಚದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ 10 ವಂದೇ ಭಾರತ್ ನೂತನ ರೈಲುಗಳಿಗೆ ಚಾಲನೆ ನೀಡಿದ್ದಾರೆ. ದೇಶದ ನಿರಂತರ ಅಭಿವೃದ್ಧಿಯಲ್ಲಿ, ಸುಗಮ ಮತ್ತು ಸಮನ್ವಯ ರೈಲ್ವೆಗಳು ಸಾರಿಗೆ ವ್ಯವಸ್ಥೆಯು ಪ್ರಮುಖ ಕೊಡುಗೆಯನ್ನು ಹೊಂದಿದೆ. ದೇಶದಲ್ಲಿ ಭಾರತೀಯ ರೈಲ್ವೆ ಮುಖ್ಯ ಸಾರಿಗೆ ವಿಧಾನವಾಗಿದೆ. ಇದು ದೇಶದ ಆರ್ಥಿಕ ಮತ್ತು ಸರ್ವತೋಮುಖ ಅಭಿವೃದ್ಧಿಯ ಬೆನ್ನೆಲುಬಾಗಿದೆ ಎಂದರು.ಮತ್ತೆರಡು ವಂದೇ ಭಾರತ ರೈಲು:
ಶ್ರೀ ಸಿದ್ಧಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್ ನಿರ್ಮಿಸಲಾಗಿದೆ. ಎಲ್ಲ ಪ್ರಮುಖ ಮಾರ್ಗಗಳ ಡಬ್ಲಿಂಗ್ ಮತ್ತು ವಿದ್ಯುದೀಕರಣ ಪೂರ್ಣಗೊಂಡಿದೆ. ನೈಋತ್ಯ ರೈಲ್ವೆ ವ್ಯಾಪ್ತಿಯ ₹ 5142 ಕೋಟಿ ಯೋಜನೆಗಳಿಗೆ ಪ್ರಧಾನಿಗಳು ಚಾಲನೆ ನೀಡಿದ್ದಾರೆ. ₹ 297 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿ, ತನ್ನಿಸಂದ್ರ ರೈಲ್ವೆ ವರ್ಕ್ಶಾಪ್ನಲ್ಲಿ ವಂದೇ ಭಾರತ ರೈಲು ಕೋಚ್ಗಳ ನಿರ್ವಹಣೆಗಾಗಿ ಡೆಮು, ಮೆಮು ಶೆಡ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ರೈಲ್ವೆ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ರೈಲ್ವೆ ಸಚಿವರು, ರೈಲ್ವೆ ರಾಜ್ಯ ಸಚಿವರು ಮತ್ತು ಎಲ್ಲ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.ದೇಶದ ಜನರಿಗೆ ನಮ್ಮದಿ:
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, 2014ರ ಪೂರ್ವದಲ್ಲಿ ಪ್ರಯಾಣಿಕರು ರೈಲು ನಿಲ್ದಾಣಕ್ಕೆ ಬರಲು ಹಿಂಜರಿಯುತ್ತಿದ್ದರು. ಅಷ್ಟರ ಮಟ್ಟಿಗೆ ಇಲ್ಲಿನ ಸೌಲಭ್ಯಗಳುದ್ದವು. ಆದರೆ, ಮೋದಿ ಪ್ರಧಾನಿಯಾದ ನಂತರ ಇದರ ಚಿತ್ರಣವನ್ನೇ ಬದಲಿಸಿದ್ದಾರೆ. ವಿಮಾನ ನಿಲ್ದಾಣಗಳ ಮಾದರಿಯಲ್ಲಿ ರೈಲು ನಿಲ್ದಾಣಗಳನ್ನು ಅಭಿವೃದ್ಧಿ ಮಾಡಲಾಗಿದೆ. ಒಂದು ನಿಲ್ದಾಣ ಒಂದು ಉತ್ಪನ್ನ ಶೀರ್ಷಿಕೆಯ ಅಡಿ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವುದು ಮತ್ತು ರೈಲ್ವೆಗೆ ಹೆಚ್ಚುವರಿ ಆದಾಯವನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಶಾಸಕ ಎಂ.ಆರ್. ಪಾಟೀಲ, ಪಾಲಿಕೆ ಮೇಯರ್ ವೀಣಾ ಬರದ್ವಾಡ, ನೈಋತ್ಯ ರೈಲ್ವೆಯ ಮಹಾಪ್ರಬಂಧಕ ಅರವಿಂದ್ ಶ್ರೀವಾಸ್ತವ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷಾ ಖರೆ, ಅಧಿಕಾರಿಗಳಾದ ಕೆ.ಎಸ್. ಜೈನ್ ಸೇರಿದಂತೆ ಹಲವರಿದ್ದರು.