ಹಾವೇರಿ ಜಿಲ್ಲೆಯ ವಿವಿಧೆಡೆ ಸುರಿದ ಮಳೆ

KannadaprabhaNewsNetwork |  
Published : May 19, 2024, 01:46 AM IST
೧೮ಎಚ್‌ವಿಆರ್೪, ೪ಎ | Kannada Prabha

ಸಾರಾಂಶ

ಹಾವೇರಿ ಜಿಲ್ಲೆಯ ವಿವಿಧಡೆ ಶನಿವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ತಂಪು ವಾತಾವರಣ ನಿರ್ಮಾಣವಾಗಿದೆ.

ಹಾವೇರಿ: ಜಿಲ್ಲೆಯ ವಿವಿಧಡೆ ಶನಿವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ತಂಪು ವಾತಾವರಣ ನಿರ್ಮಾಣವಾಗಿದೆ.ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದರಿಂದ ನಗರದ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟಿಗೆ ಸಮಸ್ಯೆಯಾಯಿತು. ಜನ ಸಂಚಾರಕ್ಕೂ ಸಮಸ್ಯೆಯಾಯಿತು. ಹಾನಗಲ್ಲ, ರಾಣಿಬೆನ್ನೂರು, ಹಿರೇಕೆರೂರು, ಸವಣೂರು ಭಾಗದಲ್ಲೂ ಸಾಧಾರಣ ಮಳೆಯಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿತ್ತು. ಸಂಜೆ ಮೋಡ ಕವಿದು ಗುಡುಗು, ಮಿಂಚು ಸಹಿತ ಮಳೆಯಾಯಿತು. ಬಿರು ಬೇಸಿಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆ ಬಂದಿದ್ದರಿಂದ ನಿಟ್ಟುಸಿರು ಬಿಟ್ಟಿದ್ದು, ವಾತಾವರಣವು ತಂಪಾಯಿತು. ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯ ವಿವಿಧಡೆ ಮಳೆ ಆಗುತ್ತಿದ್ದರಿಂದ ರೈತರು ಜಮೀನುಗಳತ್ತ ಮುಖ ಮಾಡಿದ್ದು ಬಿತ್ತನೆಗೆ ಭೂಮಿಯನ್ನು ಸಿದ್ಧಪಡಿಸುತ್ತಿದ್ದಾರೆ. ಧರೆಗೆ ತಂಪು ಮೂಡಿಸಿದ ಮಳೆ: ರಾಣಿಬೆನ್ನೂರು ನಗರದಲ್ಲಿ ಶನಿವಾರ ಸಂಜೆ 5ರ ಸುಮಾರು ಯಾವ ಮುನ್ಸೂಚನೆಯೂ ಇಲ್ಲದೇ ಏಕಾಏಕಿ ಗುಡುಗು ಸಿಡಿಲಿನಿಂದ ಸುರಿದ ಮಳೆಯು ಬಿಸಿಲಿನಿಂದ ಬೇಸತ್ತಿದ್ದ ಜನರಲ್ಲಿ ತಂಪಿನ ವಾತಾವರಣ ಮೂಡಿಸಿದೆ. ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ರಭಸದಿಂದ ಹರಿಯಿತು. ಕಚೇರಿ ಕೆಲಸ ಮುಗಿಸಿದ ಸರ್ಕಾರಿ ಇಲಾಖೆಗಳ ಸಿಬ್ಬಂದಿ ಮನೆಗೆ ತೆರಳಲು ಪ್ರಯಾಸ ಪಡಬೇಕಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!