ಬಾಲ್ಯ ವಿವಾಹ ನಿಷೇಧ ಕುರಿತು ಜನಜಾಗೃತಿ ಮೂಡಿಸಿ

KannadaprabhaNewsNetwork |  
Published : Jul 26, 2025, 12:00 AM IST
೨೫ಕೆಎಲ್‌ಆರ್-೩ಕೋಲಾರದ ಡಿಸಿ ಕಚೇರಿಯಲ್ಲಿ ನ್ಯಾಯಾಂಗ ಸಭಾಂಗಣದಲ್ಲಿ  ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಇಲಾಖೆಯ ವಿವಿಧ ಯೋಜನೆಗಳ ಮೊದಲನೇ ತ್ರೈಮಾಸಿಕ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬಾಲ್ಯ ವಿವಾಹಗಳ ಒಟ್ಟು ಪ್ರಕರಣಗಳ ಸಂಖ್ಯೆ ೫೧ ಹಾಗೂ ತಡೆಗಟ್ಟಿರುವ ಪ್ರಕರಣಗಳು ೨೧ ಬಾಕಿ ಉಳಿದಿರುವ ಒಟ್ಟು ೩೦ ಪ್ರಕರಣಗಳನ್ನು ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಪ್ರದೇಶ ಹಾಗೂ ಕೆಲ ಸಮುದಾಯಗಳಿರುವ ಪ್ರದೇಶಗಳಿಗೆ ಹೋಗಿ ಅರಿವು ಮೂಡಿಸಬೇಕು

ಕನ್ನಡಪ್ರಭ ವಾರ್ತೆ ಕೋಲಾರಬಾಲ್ಯ ವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಮಾಣವನ್ನು ಕಡಿಮೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನ್ಯಾಯಾಂಗ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಇಲಾಖೆಯ ವಿವಿಧ ಯೋಜನೆಗಳ ಮೊದಲನೇ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.

ಕಾಯ್ದೆ ಕುರಿತು ಪ್ರಚಾರ ಮಾಡಿ

೨೦೨೫-೨೬ನೇ ಸಾಲಿನಲ್ಲಿ ಇದುವರಿಗೆ ದಾಖಲಾಗಿರುವ ಬಾಲ್ಯ ವಿವಾಹಗಳ ಒಟ್ಟು ಪ್ರಕರಣಗಳ ಸಂಖ್ಯೆ ೫೧ ಹಾಗೂ ತಡೆಗಟ್ಟಿರುವ ಪ್ರಕರಣಗಳು ೨೧ ಬಾಕಿ ಉಳಿದಿರುವ ಒಟ್ಟು ೩೦ ಪ್ರಕರಣಗಳನ್ನು ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಪ್ರದೇಶ ಹಾಗೂ ಕೆಲ ಸಮುದಾಯಗಳಿರುವ ಪ್ರದೇಶಗಳಿಗೆ ಹೋಗಿ ಅರಿವು ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಮಾಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಏಕವ್ಯಕ್ತಿ ಪೋಷಕರ ಪ್ರಕರಣಗಳನ್ನು ಪತ್ತೆ ಹಚ್ಚಿ ಗೃಹಲಕ್ಷ್ಮಿ ಯೋಜನೆ ತಲುಪುವಂತೆ ಕಾರ್ಯನಿರ್ವಹಿಸಿ. ಸರ್ಕಾರಿ ದತ್ತು ಸಂಸ್ಥೆಯು ೦-೬ ವರ್ಷದೊಳಗಿನ ಕುಟುಂಬದ ಪ್ರೀತಿ ವಂಚಿತ, ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳ ಪುನರ್ವಸತಿಗೆ ನೆರವಾಗುವ ಒಂದು ಸೂಕ್ತ ಸಂಸ್ಥೆಯಾಗಿದೆ. ಇಂತಹ ಮಕ್ಕಳಿಗೆ ಶಾಶ್ವತ ಕುಟುಂಬದ ವ್ಯವಸ್ಥೆ ಕಾನೂನು ಬದ್ಧವಾಗಿ ಕಲ್ಪಿಸಲು ದತ್ತು ಸಂಸ್ಥೆಯು ನೆರವಾಗುತ್ತದೆ ಎಂದು ಹೇಳಿದರು.

ಪ್ರತ್ಯೇಕ ಬಾಲ ಮಂದಿರ

ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಂದ ಮಕ್ಕಳ ಪ್ರಕರಣ ವಿಚಾರಣೆ ವೇಳೆಯಲ್ಲಿ ರಕ್ಷಣೆ ಮತ್ತು ಘೋಷಣೆ ಅಗತ್ಯವಿರುವ ಮಕ್ಕಳ ಪಾಲನೆ ಮತ್ತು ರಕ್ಷಣೆಗಾಗಿ ಹಾಗೂ ದೀರ್ಘಾವಧಿ ಪುನರ್ವಸತಿಗಾಗಿ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಬಾಲ ಮಂದಿರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒಟ್ಟು ೧೨೫ ಮಕ್ಕಳು ದಾಖಲಾಗಿದ್ದಾರೆ ಎಂದರು.

ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೋವಿಡ್-೧೯ ರಿಂದ ಇಬ್ಬರು ಪೋಷಕರನ್ನು ಕಳೆದುಕೊಂಡ ೮ ಮಕ್ಕಳಿಗೆ ಮಾಸಿಕ ೩,೫೦೦ ರೂ.ಗಳ ಆರ್ಥಿಕ ಧನ ಸಹಾಯ ಆರ್‌ಟಿಜಿಎಸ್ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಪಿಎಂ ಕೇರ್ ಫಾರ್ ಚಿಲ್ಡ್ರನ್ ಯೋಜನೆಯಡಿ ಮಕ್ಕಳ ಮಾಹಿತಿ ಪಿಎಂ ಕೇರ್ ಪೋರ್ಟಲ್‌ನಲ್ಲಿ ಅಳವಡಿಸಲಾಗಿದೆ ಎಂದರು.

ಮಕ್ಕಳ ಸಹಾಯವಾಣಿ ಬಳಸಿ

ಮಕ್ಕಳ ಸಹಾಯವಾಣಿ ಯಾವುದೇ ರೀತಿಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ರಕ್ಷಣೆ ಮತ್ತು ಪೋಷಣೆ ಅವಶ್ಯಕತೆ ಇರುವ ಮಕ್ಕಳಿಗೆ ತುರ್ತು ಸೇವೆ ಒದಗಿಸಲು ಸಹಕಾರಿಯಾಗಿದೆ. ಮಕ್ಕಳ ಸಹಾಯವಾಣಿ-೧೦೯೮ ನ್ನು ಇ.ಆರ್.ಎಸ್.ಎಸ್-೧೧೨ ನೊಂದಿಗೆ ವಿಲೀನಗೊಳಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಅನುಸ್ಥಾನಗೊಳಿಸಿದೆ ಎಂದು ತಿಳಿಸಿದರು. ಯೋಜನೆಗಳ ಪ್ರತಿ ಪರಿಶೀಲನೆ

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಉಪಕಾರ ಯೋಜನೆ, ಪ್ರಾಯೋಜಕತ್ವ ಯೋಜನೆ, ಪೋಕ್ಸೋ ಕಾಯ್ದೆಯಡಿ ಪರಿಹಾರ ಯೋಜನೆ, ಬಾಲನ್ಯಾಯ ಯೋಜನೆ, ಬಾಲ್ಯವಿವಾಹ ತಡೆ ಯೋಜನೆ, ಭಿಕ್ಷಾಟನಾ ನಿರ್ಮೂಲನಾ ಯೋಜನೆ, ಬಾಲ ಕಾರ್ಮಿಕರ ಕಾಯ್ದೆ, ಮಕ್ಕಳ ಸಹಾಯವಾಣಿ ಪ್ರಕರಣಗಳು, ಕುಟುಂಬ ದೌರ್ಜನ್ಯ ತಡೆ ಯೋಜನೆ, ಬಾಲಕಿಯರ ವಸತಿ ನಿಲಯಗಳ ನಿರ್ವಹಣೆ, ಸಖಿ ವನ್ ಸ್ಟಾಪ್ ಯೋಜನೆ, ಸೇರಿದಂತೆ ಹಲವಾರು ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಯಿತು.

ಜಿಪಂ ಸಿಇಓ ಪ್ರವೀಣ್ ಬಿ.ಬಾಗೇವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ ಮತ್ತಿತರರು ಇದ್ದರು.

ಇದ್ದರು.

PREV

Recommended Stories

ಕೂಡಲೇ ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ ಮಾಡಿ : ತೇಜಸ್ವಿ ಆಗ್ರಹ
ಐದು ಸಾವಿರ ಕೋಟಿ ರು. ವೆಚ್ಚದ 5ನೇ ಹಂತದ ಕಾವೇರಿ ಯೋಜನೆಗೆ ಕೇವಲ 70 ಸಾವಿರ ಸಂಪರ್ಕ!