ಡ್ರಗ್ಸ್‌ ದುಷ್ಪರಿಣಾಮದ ಜಾಗೃತಿ ಮೂಡಿಸಿ

KannadaprabhaNewsNetwork |  
Published : Jun 19, 2025, 11:48 PM IST
30 | Kannada Prabha

ಸಾರಾಂಶ

ಮೈಸೂರು: ಮಕ್ಕಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಹಲವಾರು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕೂ ಮೊದಲು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳ ಗ್ರಾಮ ಸಭೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಮೈಸೂರು: ಮಕ್ಕಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಹಲವಾರು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕೂ ಮೊದಲು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳ ಗ್ರಾಮ ಸಭೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ನಾರ್ಕೋ ಸಮನ್ವಯ ಕೇಂದ್ರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡ್ರಗ್ಸ್ ಬಳಸುವುದರಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು ಹಾಗೂ ಅವುಗಳ ಬೇಡಿಕೆ ಪ್ರಮಾಣವನ್ನು ಶೂನ್ಯಕ್ಕಿಳಿಸಿದರೆ ಬಳಕೆ ನಿಲ್ಲಿಸಬಹುದು ಎಂದು ಹೇಳಿದರು.

ಡ್ರಗ್ಸ್ ಬಳಕೆ ನಿಷೇಧ ಮಾಡುವುದು ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿ ಅಲ್ಲ. ಎಲ್ಲಾ ಇಲಾಖೆಗಳ ಜವಾಬ್ದಾರಿಯೂ ಹೌದು. ಹಾಗೂ ಮುಖ್ಯವಾಗಿ ನಾಗರಿಕರು ಸಹಕರಿಸಬೇಕು. ಈ ಕುರಿತು ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

ಮೈಸೂರು ಎಸ್ಪಿ ಎನ್.ವಿಷ್ಣುವರ್ಧನ್ ಮಾತನಾಡಿ, ಡ್ರಗ್ಸ್ ಬಳಕೆ ಬಗ್ಗೆ ದೂರು ನೀಡಲು ವೆಬ್ ಸೈಟ್ ಇದ್ದು, ಅದರ ಮೂಲಕ ದೂರು ನೀಡಬಹುದು. ಮಾಹಿತಿ ನೀಡಿದವರ ಅಂತಹವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು. ಡ್ರಗ್ಸ್ ಬಳಕೆ ನಿಷೇಧ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸುವುದರಿಂದ ಅರಿವು ಮೂಡಿಸಲು ಸಾಧ್ಯ. ಈ ಸಂಬಂಧ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಜೂ.26ರಂದು ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಶಾಲಾ ಮಕ್ಕಳಿಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಡಿಸಿಪಿ ಸುಂದರ್ ರಾಜ್, ಹೆಚ್ಚುವರಿ ಎಸ್ಪಿಗಳಾದ ಸಿ. ಮಲ್ಲಿಕ್, ಎಲ್. ನಾಗೇಶ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ