ಕನ್ನಡಪ್ರಭ ವಾರ್ತೆ, ತುಮಕೂರು
ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗ ಸಾವಿತ್ರಿಬಾಯಿ ಫುಲೆ ಹಾಗೂ ಕುವೆಂಪು ಜನ್ಮದಿನಾಚರಣೆಯ ಪ್ರಯುಕ್ತ ಸೋಮವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಋತುಚಕ್ರದ ಕುರಿತು ಗ್ರಾಮೀಣ ಭಾಗದ ಹೆಣ್ಣುಮಕ್ಕಳಲ್ಲಿ ಅರಿವಿನ ಕೊರತೆಯಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟರಿ ಪ್ಯಾಡ್ ದೊರಕುವಂತಾಗಬೇಕು. ಮುಟ್ಟಿನ ಕುರಿತು ಅರಿವು ಮೂಡಿಸುವ ಕಾರ್ಯಕೈಗೊಳ್ಳಬೇಕು. ಜಿಡಿಪಿಯ ಶೇ.50 ಪಾಲನ್ನು ಹೊಂದಿರುವ ಸಂಸಾರ ನಿಭಾಯಿಸುವ ಗೃಹಿಣಿಯರಿಗೆ ಸೂಕ್ತ ಸಂಭಾವನೆ ಕೊಡುವ ಮನಸ್ಥಿತಿಯ ಸಮಾಜ ನಿರ್ಮಾಣವಾಗಬೇಕು. ಇದರಿಂದ ಮಹಿಳಾ ಸಬಲೀಕರಣವಾಗಲಿದೆ ಎಂದರು.ಮಿತಿಮೀರಿದ ಸ್ತ್ರೀವಾದದಿಂದ ಅದರ ಸಾಧಕ-ಬಾಧಕಗಳ ಕುರಿತು ಚಿಂತನೆ ನಡೆಸುವ ಕಾಲದಲ್ಲಿದ್ದೇವೆ. ಸಾವಿತ್ರಿಬಾಯಿ ಫುಲೆ ಅವರ ಧೈರ್ಯ ಹಾಗೂ ಕುವೆಂಪು ಅವರ ಸಮಾನತೆ ಸಾರುವ ಅದಮ್ಯ ಚಿಂತನಾ ಮನೋಭಾವದ ಸ್ತ್ರೀವಾದದಿಂದ ಮುನ್ನಡೆಯೋಣ ಎಂದು ಹೇಳಿದರು.
ಹಿರಿಯ ಪ್ರಾಧ್ಯಾಪಕ ಪ್ರೊ. ಪರಶುರಾಮ ಕೆ. ಜಿ. ಕುವೆಂಪು ವಿಚಾರಧಾರೆಗಳುಕುರಿತು ಮಾತನಾಡಿ, ಸಾಕ್ಷರತೆಯ ಪ್ರಮಾಣ ಹೆಚ್ಚಾಗುತ್ತಿದ್ದರೂ ಅಪರಾಧಗಳ ಸಂಖ್ಯೆ ಕ್ಷೀಣಿಸುತ್ತಿಲ್ಲ. ಮಾನವೀಯತೆಗೆ ಬೆಲೆಯಿಲ್ಲ. ವಿಶ್ವಮಾನವನಾಗಲು ಅವಕಾಶವೇ ಇಲ್ಲದಷ್ಟು ಕ್ರೌರ್ಯ ಮನೆಮಾಡಿದೆ. ಮೂಢನಂಬಿಕೆಗಳಿಂದ ವಿಮರ್ಶಾತ್ಮಕ ಚಿಂತನೆ-ವಿಚಾರಣೆ ಮಾಯವಾಗಿದೆ. ವೈಚಾರಿಕ ಮನೋಭಾವ ಇಲ್ಲವಾಗಿದೆ. ವೈಯಕ್ತಿಕ ಘನತೆ, ಸಾರ್ವತ್ರಿಕ ಭ್ರಾತೃತ್ವ, ಸ್ವೀಕಾರದ ತತ್ವಗಳು ಕಾಣೆಯಾಗಿವೆ ಎಂದು ತಿಳಿಸಿದರು.
ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ., ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ. ಗಿರಿಜಾ ಕೆ. ಎಸ್. ಉಪಸ್ಥಿತರಿದ್ದರು.