ಮುಂಡರಗಿ: ರೇಬಿಸ್ ಒಂದು ವೈರಾಣುವಿನಿಂದ ಹರಡುವ ಮಾರಕ ಕಾಯಿಲೆ. ಅದನ್ನು ತಡೆಗಟ್ಟಲು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಹೇಳಿದರು.
ಪ್ರಭಾರಿ ಪ್ರಾಂಶುಪಾಲ ಮಹೇಶ ಬದನಿಕಾಯಿ ಮಾತನಾಡಿ, ನಮ್ಮ ಹೃದಯದ ಆರೋಗ್ಯವನ್ನು ಸಧೃಡವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾಸನ, ಪೌಷ್ಟಿಕ ಆಹಾರ ಹಾಗೂ ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 7ರಿಂದ 8 ಗಂಟೆ ವರೆಗೆ ಆರೋಗ್ಯಕರ ನಿದ್ರೆ ಅವಶ್ಯಕವಾಗಿರುತ್ತದೆ ಎಂದು ಹೇಳಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಮಾತನಾಡಿ, ವಿಶ್ವ ಹೃದಯ ದಿನದ ಕುರಿತು ಪರಿಣಾಮಕಾರಿಯಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಮುಖ್ಯ ಕರ್ತವ್ಯ. ಆಧುನಿಕ ಜೀವನ ಶೈಲಿ, ಧೂಮಪಾನ, ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು ಮತ್ತು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಇವೆಲ್ಲ ಕಾರಣಗಳಿಂದಾಗಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇತ್ತೀಚಿನ ದಿನಗಳಲ್ಲಿ ಹೃದ್ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಯುವ ಜನರೆ ಹೆಚ್ಚಿನ ಸಂಖ್ಯೆಯಲ್ಲಿ ಹಠಾತ್ತಾಗಿ ಹೃದಯಾಘಾತ, ಹೃದಯ ಸ್ತಂಭನಕ್ಕೀಡಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಈ ವರ್ಷದ ಘೋಷವಾಕ್ಯ ಹೃದಯ ಬಡಿತವನ್ನು ತಪ್ಪಿಸಿಕೊಳ್ಳಬೇಡಿ ಎಂಬುದರ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.ಉಪನ್ಯಾಸಕರಾದ ಸಂತೋಷ ಕಾಗನೂರ, ಮಂಜುನಾಥ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾಣ, ಡಾ. ರವಿ ಕಡಗಾವಿ, ಡಾ. ಪ್ರವೀಣ ನಿಡಗುಂದಿ ಇದ್ದರು. ಈಶ್ವರಿ ಬಡಿಗೇರ ಪ್ರಾರ್ಥಿಸಿದರು. ಎಂ.ಎಸ್. ಸಜ್ಜನರ ಕಾರ್ಯಕ್ರಮ ನಿರೂಪಿಸಿದರು. ಎಂ.ಎಸ್. ರಬ್ಬನಗೌಡ್ರ ವಂದಿಸಿದರು.