ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಬೆಳೆಸಿ: ಪ್ರೊ. ಆರ್.ಎಲ್. ಪೊಲೀಸ್ ಪಾಟೀಲ

KannadaprabhaNewsNetwork |  
Published : Jun 19, 2025, 12:35 AM IST
18ಎಂಡಿಜಿ1, ಮುಂಡರಗಿ ತಾಲೂಕಾ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದಿಂದ ಪಟ್ಟಣದ ಕೋಟೆಭಾಗದಲ್ಲಿ ಜರುಗಿದ ಮನೆ ಮನದಲ್ಲಿ ಚೆನ್ನಮ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರೊ. ಆರ್.ಎಲ್.ಪೊಲೀಸ್ ಪಾಟೀಲ ಉದ್ಘಾಟಿಸಿ ಮಾತನಾಡಿದರು.   | Kannada Prabha

ಸಾರಾಂಶ

ಮುಂಡರಗಿ ಪಟ್ಟಣದ ಕೋಟೊ ಭಾಗದ ಮಂಜುನಾಥ ಇಟಗಿ ಅವರ ನಿವಾಸದಲ್ಲಿ ಮುಂಡರಗಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಮಹಿಳಾ ಶಹರ ಘಟಕದ ಆಶ್ರಯದಲ್ಲಿ ಮನೆ ಮನದಲ್ಲಿ ಚೆನ್ನಮ್ಮ ಕಾರ್ಯಕ್ರಮ ನಡೆಯಿತು.

ಮುಂಡರಗಿ: ನಮ್ಮ ಮಕ್ಕಳಿಗೆ ಶಾಲಾ ಶಿಕ್ಷಣ ಯಶಸ್ವಿಯಾಗಬೇಕಾದರೆ ಗೃಹಶಿಕ್ಷಣ ಉತ್ತಮವಾಗಿರಬೇಕಾಗುತ್ತದೆ. ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಬೆಳೆಸುವ ಹೊಣೆಗಾರಿಕೆ ತಂದೆ ತಾಯಂದಿರ ಮೇಲಿದೆ ಎಂದು ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ. ಆರ್.ಎಲ್. ಪೊಲೀಸ್ ಪಾಟೀಲ ಹೇಳಿದರು.

ಪಟ್ಟಣದ ಕೋಟೊ ಭಾಗದ ಮಂಜುನಾಥ ಇಟಗಿ ಅವರ ನಿವಾಸದಲ್ಲಿ ಮುಂಡರಗಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಮಹಿಳಾ ಶಹರ ಘಟಕ ಇವುಗಳ ಆಶ್ರಯದಲ್ಲಿ ಅವರು ಮಂಗಳವಾರ ಮನೆ ಮನದಲ್ಲಿ ಚೆನ್ನಮ್ಮ ಕಾರ್ಯಕ್ರಮದ ಉದ್ಘಾಟಿಸಿ, ವಿವಾಹ ಮತ್ತು ಸಂಪ್ರದಾಯ ಕುರಿತು ಮಾತನಾಡಿದರು. ಹಬ್ಬ, ಹರಿದಿನ, ಮದುವೆ ಸೇರಿದಂತೆ ನಮ್ಮ ಸಂಪ್ರದಾಯಗಳನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ನಮ್ಮ ಮಕ್ಕಳಿಗೆ ಹೇಳಿ ಕೊಡಬೇಕು. ಮದುವೆ ಸಂದರ್ಭದಲ್ಲಿ ಮಾಡುವ ಎಲ್ಲ ನಿಯಮಗಳು ಹಾಗೂ ಸಂಪ್ರದಾಯಗಳಿಗೂ ಒಂದೊಂದು ಅರ್ಥವಿದೆ. ಮದುವೆಯಾದ ಪ್ರತಿಯೊಬ್ಬ ಮಹಿಳೆಯರಿಗೂ ಮಾಂಗಲ್ಯಕ್ಕಿಂತ ಹೆಚ್ಚಿನ ಆಭರಣ ಇನ್ನೊಂದಿಲ್ಲ. ಮಾಂಗಲ್ಯ ಇಲ್ಲದಿದ್ದರೆ ಬೇರೆ ಆಭರಣಗಳಿಗೆ ಬೆಲೆಯೇ ಇರುವುದಿಲ್ಲ. ಮುಂದಿನ ಪೀಳಿಗೆಗೆ ಸಂಪ್ರದಾಯ ಪರಿಚಯಿಸುವುದಕ್ಕಾಗಿ ಅವುಗಳನ್ನು ಮುಂದುವರಿಸಿಕೊಂಡು ಹೋಗುವುದು ಅವಶ್ಯವಿದೆ. ಮನುಷ್ಯ ಜನ್ಮ ಶ್ರೇಷ್ಠ ಜನ್ಮವಾಗಬೇಕಾದರೆ ಎಲ್ಲರೂ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದರು.

ವಿಶ್ರಾಂತ ಶಿಕ್ಷಕರಾದ ಎಸ್.ಎಸ್. ಇನಾಮತಿ, ಡಿ.ಟಿ. ಪಾಟೀಲ ಹಾಗೂ ಕಾಯಕ ಯೋಗಿ ಪ್ರಶಸ್ತಿ ಪುರಸ್ಕೃತ ವೀರೇಶ ಹಡಗಲಿ ಅವರನ್ನು ಮಂಜುನಾಥ ಇಟಗಿ ಪರಿವಾರದಿಂದ ಗೌರವಿಸಲಾಯಿತು. ಸನ್ಮಾನಿತರ ಪರವಾಗಿ ಎಸ್.ಎಸ್. ಇನಾಮತಿ ಮಾತನಾಡಿ, ಕೋಟೆಭಾಗ ಎಂದರೆ ಅದು ಮೂಲ ಹಳೆಯ ಮುಂಡರಗಿ. ಇಲ್ಲಿ ಎಲ್ಲ ಸಂಪ್ರದಾಯಗಳು ನಿರಂತವಾಗಿ ನಡೆಯುತ್ತಾ ಬಂದಿವೆ. ಇಲ್ಲಿ ಎಲ್ಲ ಜಾತಿ, ಜನಾಂಗದವರಿದ್ದರೂ ಎಲ್ಲರೂ ಒಂದಾಗಿ ಜಾತ್ರೆ, ಹಬ್ಬಗಳನ್ನು ಆಚರಿಸುತ್ತಾ ಬಂದಿದ್ದೇವೆ. ದೊಡ್ಡಾಟ, ಸಣ್ಣಾಟ, ಬಯಲಾಟ, ಸಾಮಾಜಿಕ ನಾಟಕಗಳು, ಡೊಳ್ಳಿನ ಪದ, ಹಂತಿಪದಗಳು ಸೇರಿದಂತೆ ಅನೇಕ ಜನಪದಗಳ ತವರೂರು ಈ ಕೋಟೆ ಭಾಗವಾಗಿದೆ. ಇಲ್ಲಿ ವಾಸಿಸುವುದೇ ಒಂದು ಖುಷಿಯ ವಿಚಾರವಾಗಿದೆ ಎಂದರು.

ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಎಸ್.ವಿ. ಪಾಟೀಲ ಮಾತನಾಡಿ, ಈಗಾಗಲೇ ವೀರ ರಾಣಿ ಕಿತ್ತೂರು ಚೆನ್ನಮ್ಮಾಜಿ ಸಮುದಾಯ ಭವನದ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅನೇಕರು ಧನಸಹಾಯ ಮಾಡಿದ್ದಾರೆ. ಉಳಿದವರೂ ಮುಂದೆ ಬರಬೇಕು ಎಂದರು.

ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಹೊಟ್ಟೀನ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನೆ ಮನದಲ್ಲಿ ಚೆನ್ನಮ್ಮ ಇದು 6ನೇ ಕಾರ್ಯಕ್ರಮವಾಗಿದ್ದು, ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಪ್ರೋತ್ಸಾಹ ಸದಾ ಮುಂದುವರಿಯಲಿ ಎಂದರು.

ಮಂಜುನಾಥ ಇಟಗಿ, ಸಂಗೀತಾ ಇಟಗಿ, ಡಾ. ವಿ.ಕೆ. ಸಂಕನಗೌಡ್ರ, ಎನ್.ಎಂ. ಕುಕನೂರ, ರಮೇಶಗೌಡ ಪಾಟೀಲ, ರಾಜೇಶ ಅರ್ಕಲ್, ಸಿ.ಎಸ್. ಅರಸನಾಳ, ವೀರನಗೌಡ ಗುಡದಪ್ಪನವರ, ಅಶೋಕ ಹಂದ್ರಾಳ, ಎಂ.ಎಸ್. ಹೊಟ್ಟಿನ, ಶಿವಾನಂದ ಕಮತರ ಉಪಸ್ಥಿತರಿದ್ದರು. ಮಂಜುನಾಥ ಮುಧೋಳ ಸ್ವಾಗತಿಸಿದರು. ಶೋಭಾ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಲೀಲಾ ಉಮಚಗಿ ವಂದಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...