ಸಿಎಂ ಸಿದ್ದರಾಮಯ್ಯರೊಂದಿಗೆ ಗಣಿ, ಭೂ ವಿಜ್ಞಾನ ಇಲಾಖೆ ಸಚಿವರ ಚರ್ಚೆಕನ್ನಡಪ್ರಭ ವಾರ್ತೆ ಬೆಂಗಳೂರು/ದಾವಣಗೆರೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಗಣಿಗಾರಿಕೆ ಸರಳಿಕರಣ, ಇಲಾಖೆಯಲ್ಲಿ ಗುರುತಿಸಿರುವ ಬ್ಲಾಕ್ ಗಳ ಮಾಹಿತಿ ಪಡೆದು ರಾಜಸ್ವ ಹೆಚ್ಚಿಸುವ ಕುರಿತು ಸಚಿವರು ಸೂಚಿಸಿದರು. ಗಣಿ ಮಾಲೀಕರು ಸರ್ಕಾರ ಹಾಗೂ ಘನ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಮರ್ಪಕವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ರಾಜಧನ ಸಂಗ್ರಹ ಮಾಡಬೇಕು. ಖನಿಜ ಹಾಗೂ ಉಪ ಖನಿಜಗಳಿಗೆ ಸಂಬಂಧಿಸಿದಂತೆ ವಸೂಲಾಗಿರುವ ರಾಜಧನದ ರಾಜಸ್ವ ಸಂಗ್ರಹಣೆ ತ್ವರಿತಗತಿಯಲ್ಲಿ ಸಾಗಬೇಕು. ಪರಿಸರ ವಿಮೋಚನಾ ಪ್ರಮಾಣ ಅನುಗುಣವಾಗಿ ಪೆರ್ಮಿಟ್ ಪಡೆದ ಪ್ರಮಾಣ ಸಂಗ್ರಹದಲ್ಲಿ ಗಣಿ ಇಲಾಖೆ ವ್ಯಾಪ್ತಿಯ ರಾಜಧನ ಸೋರಿಕೆಯನ್ನು ತಡೆಗಟ್ಟಿ, ಎಎಸ್ಪಿ ಯೋಜನೆಯಿಂದಾಗಿರುವ ಸಮಸ್ಯೆಗಳನ್ನು ಆಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ತೋಟಗಾರಿಕಾ, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.