ಕನ್ನಡಪ್ರಭ ವಾರ್ತೆ ಹೊಸದುರ್ಗ
ಪಟ್ಟಣದ ಮದಕರಿ ವೃತ್ತದಲ್ಲಿ ಗುರುವಾರ ಗಂಡುಗಲಿ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ನಿಮಿತ್ತವಾಗಿ ಮದಕರಿ ನಾಯಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಚಿತ್ರದುರ್ಗದ ನಾಯಕರಲ್ಲಿ ಕಡೆಯ ನಾಯಕನಾಗಿದ್ದ ಮದಕರಿ ನಾಯಕ, ಚಿತ್ರದುರ್ಗದ ಸಿಂಹಾಸನವನ್ನು ಅಲಂಕರಿಸಿದಾಗ 12 ವಯಸ್ಸಿನವನಾಗಿದ್ದನು. ಅತಿ ಚಿಕ್ಕ ವಯಸ್ಸಿಗೆ ಚಿತ್ರದುರ್ಗ ಸಂಸ್ಥಾನವನ್ನು ಆಳಿದ ಕೀರ್ತಿ ಇವರಗಿದೆ. ದುರ್ಗದ ವೈರಿಗಳು ಕೋಟೆಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದಾಗ ಬೇಡ ಸಮುದಾಯ ತಮ್ಮ ನಾಯಕನಿಗೆ ನಿಷ್ಠರಾಗಿ ಉಳಿದು, ಆತನನ್ನು ರಕ್ಷಿಸುತ್ತಾರೆ. ಮದಕರಿ ನಾಯಕರಂತೆ ಅವರ ಜೊತೆಗಿದ್ದ ಸೈನ್ಯವೂ ಕೂಡ ಎದುರಾಳಿಗಳ ಎದೆ ನಡಗಿಸುತ್ತಿತ್ತು. ತ.ರ.ಸು ಅವರು ತಮ್ಮ ‘ದುರ್ಗಾಸ್ತಮಾನ’ ಕಾದಂಬರಿಯಲ್ಲಿ ದುರ್ಗದ ಐತಿಹಾಸಿಕ ಘಟನೆಗಳನ್ನು ಕಣ್ಣಿಗೆ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ ಎಂದು ಸ್ಮರಿಸಿಕೊಂಡರು.ಮುಖಂಡ ತುಂಬಿನಕೆರೆ ಬಸವರಾಜ್ ಮಾತನಾಡಿ, ಶೌರ್ಯ ಮತ್ತು ಧೈರ್ಯಕ್ಕೆ ಹೆಸರಾಗಿದ್ದ ಮದಕರಿ ನಾಯಕರು ಹೊಸದುರ್ಗ ತಾಲೂಕಿನಲ್ಲಿ ಜನಿಸಿದ್ದರು ಎಂಬುದೇ ಹೆಮ್ಮೆಯ ವಿಷಯ. ಹಿಂದೆ ನಾಯಕರು ತಮ್ಮ ಪ್ರಜೆಗಳ ರಕ್ಷಣೆಗಾಗಿ ಖಡ್ಗ ಹಿಡಿದು ಯುದ್ಧ ಮಾಡುತ್ತಿದ್ದರು. ಆದರಿಂದು ಖಡ್ಗ ಹಿಡಿಯುವ ಅವಶ್ಯಕತೆಯಿಲ್ಲ. ನಮ್ಮ ಮಕ್ಕಳು ಪೆನ್ನು ಹಿಡಿದು ಪರೀಕ್ಷೆಯಲ್ಲಿ ಯುದ್ಧ ಮಾಡಿ, ಗೆದ್ದು ಬರುವಂತೆ ನಾವೆಲ್ಲರೂ ಅವರಿಗೆ ಪ್ರೋತ್ಸಾಹ ನೀಡಬೇಕಿದೆ ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಇತ್ತೀಚೆಗಷ್ಟೇ ನಿಧನರಾದ ತಾಲೂಕು ನಾಯಕ ಸಮಾಜದ ಅಧ್ಯಕ್ಷರಾಗಿದ್ದ ಕೆ.ಟಿ.ರಂಗನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಆತ್ಮಕ್ಕೆ ಶಾಂತಿ ಕೋರಲಾಯಿತು.