ಕನ್ನಡಪ್ರಭ ವಾರ್ತೆ ಕಾರ್ಕಳ
ಅವರು ಕಾರ್ಕಳದ ಆನೆಕೆರೆಯ ಜೀರ್ಣೋದ್ಧಾರದ ಕಾರ್ಯಾಲಯದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಆಧುನಿಕತೆಯ ಸಲುವಾಗಿ ಶಿಲಾಮಯವಾಗಿ ಅದ್ಭುತವಾಗಿ ಕೆರೆ ಬಸದಿಯೂ ನಿರ್ಮಾಣವಾಗುತ್ತಿದೆ.
ಇತಿಹಾಸ ಪ್ರಸಿದ್ದ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಧಾಮಸಂಪ್ರೋಕ್ಷಣಾಪೂರ್ವಕ ಜಿನಬಿಂಬ ಪ್ರತಿಷ್ಠಾಪನೆ ಮತ್ತು ಮೇಗಿನ ನೆಲೆಯ ಭಗವಾನ್ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿಯ ಪಂಚಕಲ್ಯಾಣ ಮಹೋತ್ಸವ ಜ.೧೮ರಿಂದ ೨೨ ರವರೆಗೆ ನಡೆಯಲಿದ್ದು ಪ್ರತೀ ದಿನ ಧಾರ್ಮಿಕ ಹಾಗೂ ಸಾಂಸ್ಕತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಮಾಹಿತಿಯನ್ನು ನೀಡಿದರು.ಕಾರ್ಯಾಧ್ಯಕ್ಷ ಮಹಾವೀರ ಹೆಗ್ಡೆ ಮಾತನಾಡಿ, ಈಗಾಗಲೇ ವಿವಿಧ ೨೩ ಸಮಿತಿಗಳನ್ನು ರಚಿಸಿಕೊಂಡು ತಯಾರಿ ನಡೆಯುತ್ತಿದೆ. ಜೀರ್ಣೋದ್ದಾರ ೧೦ ವರ್ಷಗಳ ಕನಸಾಗಿತ್ತು. ಬಸದಿಯ ಕಾಮಗಾರಿಗಳು ಅಂತಿಮ ಹಂತದಲ್ಲಿದೆ. ಪಂಚ ಕಲ್ಯಾಣ ಮಹೋತ್ಸವದ ಸಂದರ್ಭದಲ್ಲಿ ೬ ಕಡೆಗಳಲ್ಲಿ ಸುಮಾರು ೪ ಸಾವಿರ ವಾಹನಗಳನ್ನು ಪಾರ್ಕ್ ಮಾಡಬಹುದಾದ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಧಾರ್ಮಿಕ ಕಾರ್ಯಕ್ರಮ ಆನೆಕೆರೆ ಬಸದಿಯ ಹೊರಾಂಗಣದಲ್ಲಿ ನಡೆಯಲಿದ್ದು, ಸಭಾಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ದಾನಶಾಲೆಯ ಬಾಹುಬಲಿ ಪ್ರವಚನ ಮಂದಿರದ ಬಳಿಯ ಭೈರವ ಅರಸು ವೇದಿಕೆಯಲ್ಲಿ ನಡೆಯಲಿದೆ. ಊಟೋಪಚಾರದ ವ್ಯವಸ್ಥೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗೌರವ ಸಲಹೆಗಾರ ಎಂ.ಕೆ. ವಿಜಯ ಕುಮಾರ್, ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ಭರತ್ ಕುಮಾರ್ ಜೈನ್, ಕೋಶಾಧಿಕಾರಿ ಶೀತಲ್ ಜೈನ್ ಶಿರ್ಲಾಲು, ಉಪಾಧ್ಯಕ್ಷ ಮಹೇಂದ್ರವರ್ಮ ಜೈನ್, ಮೆರವಣಿಗೆ ಸಮಿತಿಯ ಸಂಚಾಲಕ ಸುನಿಲ್ ಕುಮಾರ್ ಬಜಗೋಳಿ ಮತ್ತಿತರರು ಹಾಜರಿದ್ದರು.