ಮಂಜೇಶ್ವರ ಅಭ್ಯರ್ಥಿ ಸುರೇಂದ್ರನ್ ಪರವಾಗಿ ರಾಜೇಶ್ ನಾಯ್ಕ್ ಮತಯಾಚನೆ

KannadaprabhaNewsNetwork |  
Published : Apr 04, 2026, 02:45 AM IST
ರಾಜೇಶ್ ನಾಯ್ಕ್ ಮತಯಾಚನೆ | Kannada Prabha

ಸಾರಾಂಶ

ಎ. 9ರಂದು ನಡೆಯುವ ಚುನಾವಣೆಯಲ್ಲಿ ಮಂಜೇಶ್ವರ ವಿಧಾನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಕೆ.ಅವರಿಗೆ ನಿಮ್ಮ ಮತವನ್ನು ನೀಡಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಅಂಗಡಿಮುಗೇರು ಮತ್ತು ದೇಲಂಪಾಡಿ ಗ್ರಾಮದ ಮನೆಮನೆಗಳಿಗೆ ತೆರಳಿ ಮತಯಾಚಿಸಿದರು.

ಬಂಟ್ವಾಳ: ಎ. 9ರಂದು ನಡೆಯುವ ಚುನಾವಣೆಯಲ್ಲಿ ಮಂಜೇಶ್ವರ ವಿಧಾನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಕೆ.ಅವರಿಗೆ ನಿಮ್ಮ ಮತವನ್ನು ನೀಡಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಅಂಗಡಿಮುಗೇರು ಮತ್ತು ದೇಲಂಪಾಡಿ ಗ್ರಾಮದ ಮನೆಮನೆಗಳಿಗೆ ತೆರಳಿ ಮತಯಾಚಿಸಿದರು.

ಈ ಬಾರಿ ನಿಮ್ಮ ಮತವನ್ನು ಬದಲಾಯಿಸಿ ನೋಡಿ ಬದಲಾವಣೆಯ ಹೊಸ ರೂಪ ನಿಮಗೆ ತಿಳಿಯುತ್ತದೆ ಎಂದು ಮತದಾರರ ಮನಪರಿವರ್ತನೆ ಮಾಡಿದರು. ನರೇಂದ್ರ ಮೋದಿಯವರ ಜನಪರವಾದ ಯೋಜನೆಗಳು ಕಾರ್ಯರೂಪಕ್ಕೆ ತರುವ ಕೆಲಸವನ್ನು ಸುರೇಂದ್ರನ್ ಕೆ ಅವರು ಮಾಡುತ್ತಾರೆ ಎಂಬ ಭರವಸೆಯನ್ನು ಈ ಸಂದರ್ಭದಲ್ಲಿ ತಿಳಿಸಿದರು.

ಬಿಜೆಪಿ ಕಾರ್ಯಕರ್ತರ ಜೊತೆಗೆ ಚುನಾವಣಾ ಕಾರ್ಯತಂತ್ರದ ಬಗ್ಗೆ ಅವಲೋಕನ ನಡೆಸಿದ ಅವರು ಕಾರ್ಯಕರ್ತರ ಹುರುಪು ಹೆಚ್ಚಿಸಲು ಸಲಹೆಯನ್ನು ನೀಡಿದರು.

ಪ್ರತಿಯೊಂದು ಮನೆಯ ಸಂಪರ್ಕವನ್ನು ಕಾರ್ಯಕರ್ತರು ಮಾಡುವ ಜೊತೆಗೆ ಅವರ ಜೊತೆಗೆ ಸಂಪರ್ಕವನ್ನು ಇರಿಸಿಕೊಳ್ಳಲು ತಿಳಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಮಾದವ ಮಾವೆ, ಬಂಟ್ವಾಳ ಬಿಜೆಪಿ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಅಜಿತ್ ಶೆಟ್ಟಿ ಕಾವಳಮೂಡೂರು, ಕುಮಾರ್ ಅಳ್ವ, ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಬಿ.ಎಮ್.ಎಸ್.ಮೇಘನಾ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ, ಪುತ್ತಿಗೆ ಬಿಜೆಪಿ ಪಂಚಾಯತ್ ಸಮಿತಿ ಅಧ್ಯಕ್ಷ ಪುರುಷೋತ್ತಮ ದೇರಡ್ಕ, ಬೂತ್ ಅಧ್ಯಕ್ಷ ಕೇಶವ ಮುಗು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂರು ವರ್ಷದಲ್ಲಿ 2809 ಜನ ರೈತರ ಸಾವು: ಕೇಂದ್ರ ಸಚಿವ ಸೋಮಣ್ಣ
ಕಾಂಗ್ರೆಸ್‌ನಷ್ಟು ಲಜ್ಜೆಗೇಡಿ ಸರ್ಕಾರ ನಾನು ನೋಡಿಲ್ಲ: ಸಂಸದ ಜಿಗಜಿಣಗಿ