ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡ ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಸಮಾನತೆಯ ಹರಿಕಾರ ಸಮಾಜವನ್ನು ಸುಧಾರಿಸಿದ ಮಹಾನ್ ನಾಯಕರಾದ ದೇವರಾಜ ಅರಸ್ ಅವರು ಹಿಂದುಳಿದ ವರ್ಗ ಮತ್ತು ದೀನ ದಲಿತರ ಉದ್ದಾರಕ್ಕಾಗಿ ಶ್ರಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರೂ ಸಾಗಬೇಕು. ಅವರು ಹಾಕಿಕೊಟ್ಟಂತಹ ದಾರಿಯಲ್ಲಿ ಮುನ್ನಡೆಯುವಂತೆ ಸಲಹೆ ನೀಡಿದರು.ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿ ಆದ ಸಂದರ್ಭದಲ್ಲಿ ಜನಪರವಾದ ಉತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿದ್ದರು. ಹಾಗೆಯೇ ಡಿ.ದೇವರಾಜ ಅರಸು ಅವರು ಹಿಂದುಳಿದ ವರ್ಗದವರಿಗೆ ಹಾಗೂ ದೀನ ದಲಿತರಿಗೆ ಪ್ರಜಾಪ್ರಭುತ್ವದಲ್ಲಿ ಸಿಗಬೇಕಾದ ಸೌಲಭ್ಯಗಳನ್ನು ಕೊಟ್ಟಿರುವುದು ಅಚ್ಚಳಿಯದೆ ಉಳಿದಿವೆ ಎಂದರು.
ರಾಜೀವ್ ಗಾಂಧಿಯವರ ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಮೀಸಲಾತಿಗಳಿಂದ ಬಹುತೇಕರಿಗೆ ಅಧಿಕಾರ ದೊರೆಯುವಂತಾಗಿದೆ ತಾಂತ್ರಿಕ ಜಗತ್ತಿನಲ್ಲಿ ಪ್ರಪಂಚಕ್ಕೆ ಸವಾಲ್ ಎಂಬಂತೆ ನಮ್ಮ ದೇಶವನ್ನು ರೂಪಿಸಿದ ರಾಜೀವ್ ಗಾಂಧಿ ಅವರನ್ನು ಈ ದೇಶದ ಜನ ಮರೆಯಬಾರದು ಎಂದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ, ವಕೀಲರಾದ ಡಿ.ಸಿ.ಪುಟ್ಟೇಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ನಗರಸಭಾ ಸದಸ್ಯ ಪರಮೇಶ್ ರಾಜ್ ಅರಸ್, ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷ ಮಲ್ಲೇಶ್, ನಗರ ಆಶ್ರಯ ಸಮಿತಿ ಸದಸ್ಯ ಪ್ರಸಾದ್ ಅಮಿನ್, ಸಿಡಿಎ ಸದಸ್ಯ ಶೃದೀಪ್, ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಜಯರಾಜ್ ಅರಸ್, ಶಿವರಾಂ, ನಾಗೇಶ್ ರಾಜ್ ಅರಸ್, ನಾಗೇಶ್, ಎಚ್.ಎಸ್.ಜಗದೀಶ್, ಸುನೀಲ್, ಸುರೇಶ್ ಕುಮಾರ್ ಹಾಜರಿದ್ದರು.