ರೆಡ್ ಕ್ರಾಸ್ ಸಂಸ್ಥೆಗೆ ಸಭಾಪತಿಯಾಗಿ ರಾಜೀವ, ಉಪಸಭಾಪತಿಯಾಗಿ ಶ್ರೀನಿವಾಸ ಹ್ಯಾಟಿ ಆಯ್ಕೆ

KannadaprabhaNewsNetwork |  
Published : Apr 02, 2025, 01:04 AM IST
1ಕೆಪಿಎಲ್7:ಬೆಂಗಳೂರಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆಯ ರಾಜ್ಯ ಶಾಖೆಗೆ ಸಭಾಪತಿಯಾಗಿ ಆಯ್ಕೆಯಾದ ರಾಜೀವ ಶೆಟ್ಟಿ, ಉಪಸಭಾಪತಿಯಾಗಿ ಕೊಪ್ಪಳದ ಶ್ರೀನಿವಾಸ ಹ್ಯಾಟಿ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸಭಾಪತಿ ಹುದ್ದೆಗೆ ಮೂರು ಜನ ಆಕಾಂಕ್ಷಿಗಳು ಸ್ಪರ್ಧಿಸಿದ್ದರು. ಉಪ ಸಭಾಪತಿ ಹುದ್ದೆಗೆ ಇಬ್ಬರು ಸ್ಪರ್ಧಿಸಿದ್ದರು.

ಕೊಪ್ಪಳ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೆಂಗಳೂರು ರಾಜ್ಯಶಾಖೆಗೆ ಮೂರು ವರ್ಷಗಳ ಅವಧಿಗೆ ಸಭಾಪತಿ ಹಾಗೂ ಉಪಸಭಾಪತಿ ಹುದ್ದೆಗೆ ಮಂಗಳವಾರ ರೆಡ್ ಕ್ರಾಸ್ ಸಂಸ್ಥೆ ಕಚೇರಿಯಲ್ಲಿ ಚುನಾವಣೆ ಜರುಗಿತು.

ಚುನಾವಣೆಯಲ್ಲಿ ಸಭಾಪತಿಯಾಗಿ ಉಡುಪಿ ಶಾಖೆಯ ರಾಜೀವ ಶೆಟ್ಟಿ ಹಾಗೂ ಉಪಸಭಾಪತಿಯಾಗಿ ಕೊಪ್ಪಳ ಶಾಖೆಯ ಡಾ.ಶ್ರೀನಿವಾಸ ಹ್ಯಾಟಿ ಆಯ್ಕೆಯಾಗಿದ್ದಾರೆ.

ಸಭಾಪತಿ ಹುದ್ದೆಗೆ ಮೂರು ಜನ ಆಕಾಂಕ್ಷಿಗಳು ಸ್ಪರ್ಧಿಸಿದ್ದರು. ಉಪ ಸಭಾಪತಿ ಹುದ್ದೆಗೆ ಇಬ್ಬರು ಸ್ಪರ್ಧಿಸಿದ್ದರು. ಒಟ್ಟು 30 ಸದಸ್ಯರು ತಮ್ಮ ಮತ ಚಲಾಯಿಸಿದರು. ಸಭಾಪತಿ ಆಯ್ಕೆಗೆ ಬಾಗಲಕೋಟೆ ಶಾಖೆಯ ಆನಂದ ಜಿಗಜಿನ್ನಿ, ಶಿವಮೊಗ್ಗ ಶಾಖೆಯ ಎಸ್.ಪಿ. ದಿನೇಶ ಹಾಗೂ ಉಡುಪಿ ಶಾಖೆಯ ಬಸ್ರೂರು ರಾಜೀವ ಶೆಟ್ಟಿ ಈ ಮೂವರು ತಲಾ 10 ಮತಗಳನ್ನು ಪಡೆದರು. ಇದರಲ್ಲಿ ಕೊನೆಗೆ ಚೀಟಿ ಎತ್ತಿದಾಗ ಉಡುಪಿ ಶಾಖೆಯ ಬಸ್ರೂರು ರಾಜೀವ ಶೆಟ್ಟಿ ಸಭಾಪತಿಯಾಗಿ ಆಯ್ಕೆಯಾದರು.

ಉಪ ಸಭಾಪತಿಗೆ ಇಬ್ಬರು ಸ್ಪರ್ಧಿಸಿದ್ದರು. ಇದರಲ್ಲಿ ಬಳ್ಳಾರಿಯ ಎಂ.ಎ.ಶಕೀಬ್ 11 ಮತ ಪಡೆದರೆ,‌ ಕೊಪ್ಪಳ ಶಾಖೆಯ ಡಾ. ಶ್ರೀನಿವಾಸ ಹ್ಯಾಟಿ 19 ಮತ ಪಡೆದು ಜಯಶಾಲಿಯಾಗಿದ್ದಾರೆ. ಡಾ.ಶ್ರೀನಿವಾಸ ಹ್ಯಾಟಿ ಆಯ್ಕೆಗೆ ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಪದಾಧಿಕಾರಿಗಳು, ಸ್ನೇಹಿತರು ಹರ್ಷ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ