ಲೋಕಾರ್ಪಣೆ । ರಾಜು ವಿರಚಿತ ಮೂರು ಕಾದಂಬರಿಗಳ ಬಿಡುಗಡೆ
ಎ.ಜಿ.ರಾಜು ಅವರು ಶಿಕ್ಷಕ ವೃತ್ತಿಯ ಜೊತೆಗೆ ರಂಗಭೂಮಿ, ಸಾಹಿತ್ಯ, ಕನ್ನಡ, ಸಂಸ್ಕೃತಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಈ ಸಮಾಜಕ್ಕೆ ಉತ್ತಮ ಕಾದಂಬರಿಗಳನ್ನು ರಚನೆ ಮಾಡಿದ್ದಾರೆ. ರಾಜುರವರು ಅತ್ಯುತ್ತಮವಾದ ಮೂರು ಕೃತಿಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಈ ಸಮಾಜಕ್ಕೆ ಹಾಗೂ ಹೊಸ ಪೀಳಿಗೆಗೆ ಆದರ್ಶ ಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ನಗರದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಮಹಾ ವಿದ್ಯಾಲಯ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸೃಷ್ಟಿ ಪ್ರಕಾಶನ ಚನ್ನರಾಯಪಟ್ಟಣ ಜಂಟಿಯಾಗಿ ಗೌರವ ಡಾಕ್ಟರೇಟ್ ಪುರಸ್ಕೃತ ಎ.ಜಿ.ರಾಜು ರವರ ಮೂರು ಕಾದಂಬರಿಗಳಾದ ‘ಗುಬ್ಬಚ್ಚಿ ಗೂಡು’, ‘ಮೋಕ್ಷಗಾಮಿ’, ‘ನಗುವಿನ ಒಡತಿ’ ಎಂಬ ಪುಸ್ತಕಗಳನ್ನು ಲೋಕರ್ಪಣೆ ಮಾಡಿ ಮಾತನಾಡಿದರು.ರಾಜುರವರ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತಿರುವ ಇವರ ಕುಟುಂಬದ ಎಲ್ಲಾ ಸದಸ್ಯರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇವರು ಇನ್ನೂ ಹೆಚ್ಚಿನ ಕೃತಿಗಳನ್ನು ಈ ಸಮಾಜಕ್ಕೆ ನೀಡಲಿ ಎಂದು ಶುಭ ಹಾರೈಸಿದರು.