ಕನ್ನಡಪ್ರಭ ವಾರ್ತೆ ಬೆಂಗಳೂರು
ಇನ್ನುಳಿದಂತೆ ಬಿಜೆಪಿಯ ನಾರಾಯಣಸಾ.ಕೆ ಭಾಂಡಗೆ, ಕಾಂಗ್ರೆಸ್ನ ಅಜಯ್ ಮಕನ್, ಜಿ.ಸಿ. ಚಂದ್ರಶೇಖರ್ ಮತ್ತು ಡಾ. ಸೈಯದ್ ನಾಸಿರ್ ಹುಸೇನ್ ಹಾಗೂಗು ಜೆಡಿಎಸ್ನ ಡಿ.ಕುಪೇಂದ್ರ ರೆಡ್ಡಿ ಅವರ ನಾಮಪತ್ರಗಳು ಮಾನ್ಯಗೊಂಡಿದೆ. ಇದೇ ತಿಂಗಳು 20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಒಂದು ವೇಳೆ ಯಾರಾದರೂ ನಾಮಪತ್ರ ಹಿಂಪಡೆದರೆ ಮಾತ್ರ ಅವಿರೋಧ ಆಯ್ಕೆ ನಡೆಯಲಿದೆ. ಆದರೆ, ಪಸ್ತುತ ಸನ್ನಿವೇಶದಲ್ಲಿ ಯಾರೂ ಸಹ ನಾಮಪತ್ರ ಹಿಂಪಡೆಯುವ ಸಾಧ್ಯತೆ ಇಲ್ಲ. ಹೀಗಾಗಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ. ಈ ತಿಂಗಳ 27ರಂದು ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ಗಂಟೆವರೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ106 ರಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಜರುಗಲಿದೆ.