ಕನ್ನಡಪ್ರಭ ವಾರ್ತೆ ಕಾರ್ಕಳ
‘ಕನ್ನಡಪ್ರಭ’ ಪತ್ರಿಕೆಯಲ್ಲಿ ಜ.31 ರಂದು ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಅಜೆಕಾರಿನ ಡೊಂಬರಪಲ್ಕೆಯ ಶ್ರೀನಿವಾಸ್ ಯಾನೆ ಅಪ್ಪಿಯಣ್ಣ ಅವರು ಕಳೆದ 50 ವರ್ಷಗಳಿಂದ ರಸ್ತೆ ದುರಸ್ತಿ ಮಾಡುವ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ತಾ.ಪಂ. ಸಿಇಒ, ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ಮರ್ಣೆ ಪಂಚಾಯಿತಿ ಸ್ಪಂದಿಸಿ ರಸ್ತೆ ದುರಸ್ತಿಗೊಳಿಸಿತ್ತು.
ಹಿರಿಯ ಉದ್ಯಮಿ ಹಾಗೂ ದಾನಶೂರ ಅಶ್ರಫ್ ಷಾ ಮಂತೂರು ಅವರ ದತ್ತಿನಿಧಿ ಪ್ರಶಸ್ತಿಯನ್ನು ಮೇ 3 ರಂದು ಸೀತಾಂಗೋಳಿಯ ಎಲೈನ್ಸ್ ಸಭಾಂಗಣದಲ್ಲಿ ಪ್ರದಾನ ಮಾಡಲಾಗುತ್ತಿದೆ. ಸ್ವಾಗತ ಸಮಿತಿಯ ಅಧ್ಯಕ್ಷ ಕೆ. ಕೆ. ಶೆಟ್ಟಿ ಕುತ್ತಿಕಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.