ಸೋಮವಾರಪೇಟೆಯಲ್ಲಿ ರಾಮನವಮಿ ಆಚರಣೆ

KannadaprabhaNewsNetwork |  
Published : Apr 09, 2025, 12:30 AM IST
ಸೋಮವಾರಪೇಟೆಯಲ್ಲಿ ವಿಜೃಂಭಿಸಿದ ರಾಮನಮವಿ ಶೋಭಾಯಾತ್ರೆ: 8 ಮಂಟಪಗಳಿಂದ ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ: ಸಾವಿರಾರು ಭಕ್ತರಿಂದ ವೀಕ್ಷಣೆ | Kannada Prabha

ಸಾರಾಂಶ

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಶ್ರೀ ರಾಮನವಮಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾನುವಾರ ಶ್ರೀರಾಮ ನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಆಂಜನೇಯ ದೇವಾಲಯ ಮತ್ತು ಕುರುಹಿನ ಶೆಟ್ಟಿ ಸಮಾಜದ ಶ್ರೀ ರಾಮಮಂದಿರದಲ್ಲಿ ಬೆಳಗ್ಗಿನಿಂದ ವಿಶೇಷ ಪೂಜೆಗಳ ನಡೆದವು. ಆಂಜನೇಯ ದೇವಾಲಯದಲ್ಲಿ ಭಕ್ತರಿಗೆ ಕೋಸಂಬರಿ, ಪಾನಕ ಹಾಗೂ ಮಜ್ಜಿಗೆ ವಿತರಿಸಲಾಯಿತು. ಶ್ರೀ ರಾಮ ಉತ್ಸವ ಸಮಿತಿ ವತಿಯಿಂದ ಜ್ಞಾನ ವಿಕಾಸ ಶಾಲೆಯಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿತ್ತು.

ಸಂಜೆ ಹಲವೆಡೆಗಳಿಂದ ಆಗಮಿಸಿದ್ದ 8 ವಿದ್ಯುತ್ ದೀಪಗಳಿಂದ ಅಲಂಕೃತ ಮಂಟಪಗಳ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಡೆಯಿತು. ಮೆರವಣಿಗೆ ಸಂದರ್ಭ ಸ್ಥಳೀಯ ವಾದ್ಯ ತಂಡಗಳು, ಮೈಸೂರು ತಮಟೆ, ನಾಸಿಕ್ ಬ್ಯಾಂಡ್, ವೀರಗಾಸೆ ನೃತ್ಯ, ವಿವಿಧ ವೇಷ ಕುಣಿತಗಳು ಮೆರವಣಿಗೆಯಲ್ಲಿ ಗಮನ ಸೆಳೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!