ಕೋದಂಡ ರಾಮ ದೇವಾಲಯದಲ್ಲಿ ರಾಮನವಮಿ

KannadaprabhaNewsNetwork |  
Published : Mar 27, 2026, 02:45 AM IST
ಚಿತ್ರ.1: ರಾಮನವಮಿಯ ಅಂಗವಾಗಿ ರಾಮತಾರಕ ಹೋಮವನ್ನು ಪ್ರಧಾನ ಅರ್ಚಕ ಹಾ.ಮಾ.ಗಣೇಶ್ ಶರ್ಮಾ ಅವರ ನೇತೃತ್ವದಲ್ಲಿ ಜಯಂತ್ ಭಟ್, ನರಸಿಂಹ ಭಟ್,ಪುರುಷೋತ್ತಮ ಭಟ್, ಮನೋಜ್ ಭಟ್ ನೇರವೇರಿಸುತ್ತಿರುವುದು.2:ರಾಮನವಮಿ ಅಂಗವಾಗಿ ಸುತ್ತಲಿನ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕಾರ್ಯಗಳಲ್ಲಿ ಭಾಗವಹಿಸಿರುವುದು. | Kannada Prabha

ಸಾರಾಂಶ

ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡ ರಾಮ ದೇವಾಲಯದಲ್ಲಿ ಗುರುವಾರ ಶ್ರದ್ಧಾಭಕ್ತಿಯಿಂದ ರಾಮನವಮಿಯನ್ನು ಆಚರಿಸಲಾಯಿತು.

ಕನ್ನಡಪ್ರಭವಾರ್ತೆ ಸುಂಟಿಕೊಪ್ಪ

ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡ ರಾಮ ದೇವಾಲಯದಲ್ಲಿ ಗುರುವಾರ ಶ್ರದ್ಧಾಭಕ್ತಿಯಿಂದ ರಾಮನವಮಿಯನ್ನು ಆಚರಿಸಲಾಯಿತು.ಕೊದಂಡ ರಾಮ ಮಂದಿರ ಮತ್ತು ರಾಜ್ಯ ಹೆದ್ದಾರಿಯಲ್ಲಿ ಕೆಸರಿ ಬಣದ ಬಂಟಿಂಗ್ಸ್, ಪ್ಲೆಕ್ಸ್, ವಿದ್ಯುತ್ ದೀಪ, ಬಣ್ಣ ಬಣ್ಣದ ಹೂಗಳಿಂದ ಅಲಂಕಾರಗೊಳಿಸಲಾಗಿತು. ಕೋದಂಡ ರಾಮ ಮಂದಿರದಲ್ಲಿ ಬೆಳಿಗ್ಗೆ ರಾಮ, ಸೀತೆ, ಲಕ್ಷ್ಮಣ, ಆಂಜನೇಯ ಸ್ವಾಮಿಗೆ ಬೆಳ್ಳಿಯ ಕವಚವನ್ನು ಅಳವಡಿಸಿ ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಿ ಪೂಜಾ ಕೈಂಕರ್ಯವನ್ನು ದೇವಾಲಯದ ಮುಖ್ಯ ಅರ್ಚಕ ಜಯಂತ್ ಭಟ್ ನೇತೃತ್ವದಲ್ಲಿ ನಡೆಸಲಾಯಿತು. ನಂತರ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕದ ಬಳಿಗೆ ರಾಮತಾರಕ ಹೋಮವನ್ನು ಪ್ರಧಾನ ಅರ್ಚಕ ಹಾ.ಮಾ.ಗಣೇಶ್ ಶರ್ಮಾ ಅವರ ನೇತೃತ್ವದಲ್ಲಿ ಜಯಂತ್ ಭಟ್, ನರಸಿಂಹ ಭಟ್, ಪುರುಷೋತ್ತಮ ಭಟ್, ಮನೋಜ್ ಭಟ್ ನೆರವೇರಿಸಿದರು.ಮದ್ಯಾಹ್ನ ವಿಶೇಷ ಮಂಗಳಾರತಿ,ಮಹಾ ಆರತಿ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ನೆರೆದಿದ್ದ ಭಕ್ತರಿಗೆ ಸಮಿತಿಯ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಸುಂಟಿಕೊಪ್ಪ ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಆಗಮಿಸಿ ಪೂಜಾ ಕೈಂಕಾರ್ಯಗಳಲ್ಲಿ ಭಾಗವಹಿಸಿದರು. ಈ ಸಂದರ್ಭ ಗೌರಿ ಗಣೇಶೋತ್ಸವ ಸಮಿತಿ ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ನಿಖಿಲ್, ಪಿ.ಆರ್.ಸುನಿಲ್ ಕುಮಾರ್, ಧನುಕಾವೇರಪ್ಪ, ಜೆ.ಎನ್.ಚಂದ್ರಶೇಖರ್, ಸದಾಶಿವ ರೈ, ಸುರೇಶ್ ಗೋಪಿ, ಬಿ.ಕೆ.ಪ್ರಶಾಂತ್, ಎಂ.ಎಸ್.ಸುನಿಲ್, ಮಹೇಂದ್ರ, ಲೀಲಾಮೇದಪ್ಪ, ಪವಿತ್ರ ಶೆಟ್ಟಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

14 ವರ್ಷದ ಎಲ್ಲ ಬಾಲಕಿಯರು ಉಚಿತ ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ
ಸಾಮಾಜಿಕ ಜಾಲತಾಣಗಳಲ್ಲಿ ಸದಸ್ಯರ ತೇಜೋವಧೆಗೆ ಆಕ್ಷೇಪ