ದಾನಧರ್ಮದ ಪ್ರಾಮುಖ್ಯತೆ ತಿಳಿಸಿಕೊಟ್ಟ ರಂಜಾನ್‌

KannadaprabhaNewsNetwork |  
Published : Mar 22, 2026, 01:30 AM IST
21ಎಚ್ಎಸ್ಎನ್್‌13 : ಹೊಳೆನರಸೀಪುರ ಪಟ್ಟಣದಲ್ಲಿ ರಮಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರು ಅರಕಲಗೂಡು ರಸ್ತೆಯ ಈದ್ಗಾ ಮೈದಾನದಲ್ಲಿ ನಡೆಸಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಮೌಲಾನ ಅಲಿರಜ ಅವರ ಉಪದೇಶವನ್ನು ಆಲಿಸಿದರು. | Kannada Prabha

ಸಾರಾಂಶ

ಸುನಿ ಜುಮ್ಮಾ ಮಸೀದಿಯ ಉಸ್ತುವಾರಿ ಮಹಮದ್ ಫರೀಫ್ ಮುಸಲ್ಮಾನರ ಪವಿತ್ರ ಹಾಗೂ ದೊಡ್ಡ ಹಬ್ಬಗಳಲ್ಲಿ ರಂಜಾನ್ ಮೊದಲನೆಯದು ಮತ್ತು ಹೆಚ್ಚಿನ ಪ್ರಾಮುಖ್ಯತೆ ಹೊಂದಿದೆ. ಪ್ರವಾದಿ ಮುಹಮ್ಮದ್ ಈ ತಿಂಗಳು ಪವಿತ್ರ ಕುರಾನ್‌ನ ಬಹಿರಂಗ ಪಡಿಸಿದರು ಎಂದು ನಂಬಲಾಗಿದೆ. ಈ ತಿಂಗಳಲ್ಲಿ ಉಪವಾಸ ಮಾಡುವ ಮೂಲಕ ದೇವರ ಜತೆಯಲ್ಲಿ ನಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತೆ ಮತ್ತು ದೇವರಿಗೆ ಹತ್ತಿರವಾಗಲು ಸಹಾಯ ಮಾಡುತ್ತೆ ಎಂಬ ನಂಬಿಕೆ ನಮ್ಮಲಿದೆ. ಈ ತಿಂಗಳಲ್ಲಿ ಉಪವಾಸ ಮಾಡಿದ್ರೆ ಕಷ್ಟ ಸಂಕಷ್ಟಗಳು ಕಡಿಮೆಯಾಗುತ್ತೆ ಹಾಗೂ ಬಡವರಿಗೆ ದಾನ ಧರ್ಮ ಮಾಡುವುದು ಮತ್ತು ಹಸಿದವರಿಗೆ ಆಹಾರ ನೀಡುವಂಥ ಪುಣ್ಯ ಕಾರ್ಯ ಮಾಡುವ ಮೂಲಕ ಪವಿತ್ರ ಈದ್-ಉಲ್-ಫಿತರ್ ಹಬ್ಬವನ್ನು ಬಾಂಧವ್ಯದ ಜತೆಗೆ ಸಂಭ್ರಮದಿಂದ ಆಚರಣೆ ಮಾಡುತ್ತೇವೆ ಎಂದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರಪಟ್ಟಣದ ಅರಕಲಗೂಡು ರಸ್ತೆಯ ಈದ್ಗಾ ಮೈದಾನದಲ್ಲಿ ಈದ್-ಉಲ್-ಫಿತರ್ (ಪವಿತ್ರ ರಂಜಾನ್ ಹಬ್ಬ) ಪ್ರಯುಕ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪಟ್ಟಣದ ಈದ್ಗಾ ಮೈದಾನದಲ್ಲಿ ಶನಿವಾರ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ನಂತರ ಮೌಲಾನ ಅಲಿರಜ ಅವರು ನಡೆಸಿಕೊಟ್ಟ ಪ್ರವಚನದಲ್ಲಿ ಫಿತರ್(ಉಪವಾಸ), ಜಕಾತ್(ದಾನ ಧರ್ಮ) ಬಗ್ಗೆ ತಿಳಿಸಿಕೊಟ್ಟರು. ಉಳ್ಳವರು ಬಡವರಿಗೆ ದಾನವನ್ನು ಮಾಡಿ, ಅವರುಗಳು ಸಹ ಹಬ್ಬವನ್ನು ನೆಮ್ಮದಿ ಮತ್ತು ನಿಶ್ಚಿಂತೆಯಿಂದ ಆಚರಣೆ ಮಾಡುವಂತೆ ಅವಕಾಶ ಕಲ್ಪಿಸಬೇಕು. ಫಿತರ್ ಆಚರಣೆಯಿಂದ ಬಡವರ ಸಂತೋಷದಲ್ಲಿ ದೇವರನ್ನು ಕಾಣಬಹುದು ಮತ್ತು ಅಲ್ಲಾಹ ಕೃಪೆಗೆ ಪಾತ್ರರಾಗಬಹುದು ಎಂದು ತಿಳಿಸಿದರು.

ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಈದ್ಗಾ ಮೈದಾನದಲ್ಲಿ ಮುಸ್ಲೀಮರ ಜತೆ ಕುಳಿತು ಮೌಲಾನ ಅವರ ಉಪದೇಶವನ್ನು ಆಲಿಸಿ, ಪ್ರಾರ್ಥನೆಯಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯ ಕೋರಿದರು.

ಸುನಿ ಜುಮ್ಮಾ ಮಸೀದಿಯ ಉಸ್ತುವಾರಿ ಮಹಮದ್ ಫರೀಫ್ ಮಾಧ್ಯಮದ ಜತೆ ಮಾತನಾಡಿ ಮುಸಲ್ಮಾನರ ಪವಿತ್ರ ಹಾಗೂ ದೊಡ್ಡ ಹಬ್ಬಗಳಲ್ಲಿ ರಂಜಾನ್ ಮೊದಲನೆಯದು ಮತ್ತು ಹೆಚ್ಚಿನ ಪ್ರಾಮುಖ್ಯತೆ ಹೊಂದಿದೆ. ಪ್ರವಾದಿ ಮುಹಮ್ಮದ್ ಈ ತಿಂಗಳು ಪವಿತ್ರ ಕುರಾನ್‌ನ ಬಹಿರಂಗ ಪಡಿಸಿದರು ಎಂದು ನಂಬಲಾಗಿದೆ. ಈ ತಿಂಗಳಲ್ಲಿ ಉಪವಾಸ ಮಾಡುವ ಮೂಲಕ ದೇವರ ಜತೆಯಲ್ಲಿ ನಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತೆ ಮತ್ತು ದೇವರಿಗೆ ಹತ್ತಿರವಾಗಲು ಸಹಾಯ ಮಾಡುತ್ತೆ ಎಂಬ ನಂಬಿಕೆ ನಮ್ಮಲಿದೆ. ಈ ತಿಂಗಳಲ್ಲಿ ಉಪವಾಸ ಮಾಡಿದ್ರೆ ಕಷ್ಟ ಸಂಕಷ್ಟಗಳು ಕಡಿಮೆಯಾಗುತ್ತೆ ಹಾಗೂ ಬಡವರಿಗೆ ದಾನ ಧರ್ಮ ಮಾಡುವುದು ಮತ್ತು ಹಸಿದವರಿಗೆ ಆಹಾರ ನೀಡುವಂಥ ಪುಣ್ಯ ಕಾರ್ಯ ಮಾಡುವ ಮೂಲಕ ಪವಿತ್ರ ಈದ್-ಉಲ್-ಫಿತರ್ ಹಬ್ಬವನ್ನು ಬಾಂಧವ್ಯದ ಜತೆಗೆ ಸಂಭ್ರಮದಿಂದ ಆಚರಣೆ ಮಾಡುತ್ತೇವೆ ಎಂದರು. ಪ್ರಾರ್ಥನೆಯಲ್ಲಿ ಜಬೀರ್‌, ಇಮ್ರಾನ್, ಅಹಮದ್, ರಿಯಾಜ್, ಮಹಮದ್ ಖಾಲೀದ್, ನವಾಬ್ ಖಾನ್, ಮುಜಾಹಿದ್ ಖಾನ್, ಇಲಿಯಾಜ್, ಮುಕೀಬ್ ಉಲ್ಲಾ, ನದೀಮ್, ಆರೀಫ್, ಹಾಗೂ ಇತರರು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಕಲ್ಯಾಣಕ್ಕಾಗಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ
ಜೀವನದ ಉನ್ನತಿಗೆ ಧರ್ಮ ಪಾಲನೆ ಮುಖ್ಯ: ರಂಭಾಪುರಿ ಶ್ರೀ