ಕನ್ನಡಪ್ರಭ ವಾರ್ತೆ, ಬೆಂಗಳೂರು
ಮೊದಲ ಹಂತದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಪಟ್ಟು ಹಿಡಿದಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ ಅವರನ್ನು ಖುದ್ದು ಶಿವಕುಮಾರ್ ಅವರು ತಡರಾತ್ರಿವರೆಗೆ ಮನವೊಲಿಸಿದ್ದರು. ಇದೀಗ ಸಂಪುಟ ವಿಸ್ತರಣೆ ವೇಳೆ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಬದಲಿಗೆ ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.
ಅಲ್ಪಸಂಖ್ಯಾತರಿಗೆ ಆದ್ಯತೆ:ಖಾತೆ ಹಂಚಿಕೆಯಲ್ಲೂ ಅಲ್ಪಸಂಖ್ಯಾತ ಸಚಿವರಿಗೆ ಆದ್ಯತೆ ನೀಡಲಾಗಿದೆ. ಜಮೀರ್ ಅಹ್ಮದ್ಖಾನ್ ಅವರಿಗೆ ವಸತಿ ಇಲಾಖೆ ತಪ್ಪಿಸಲು ತೀವ್ರ ಪ್ರಯತ್ನ ನಡೆದ ಹೊರತಾಗಿಯೂ ಜಮೀರ್ ಅವರು ವಸತಿ ಇಲಾಖೆ ಉಳಿಸಿಕೊಂಡಿದ್ದಾರೆ. ಯು.ಟಿ. ಖಾದರ್, ರಿಜ್ವಾನ್ ಅರ್ಷದ್ ಅವರಿಗೂ ಪ್ರಮುಖ ಖಾತೆಗಳನ್ನು ನೀಡುವ ಮೂಲಕ ಸಂಪುಟದಲ್ಲಿ ಆದ್ಯತೆ ನೀಡಲಾಗಿದೆ.ಹಳೆ ಖಾತೆಯಲ್ಲೇ ಮುಂದುವರೆದವರು:ಸಂತೋಷ್ ಲಾಡ್ ಅವರಿಗೆ ಕಾರ್ಮಿಕ ಮತ್ತು ಉದ್ಯೋಗ ಖಾತೆ, ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಖಾತೆ, ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಶಿವರಾಜ್ ತಂಗಡಗಿ ಅವರ ಬಳಿ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳೇ ಮುಂದುವರೆಸಲಾಗಿದೆ.9 ಮಂದಿ ಹೊಸಬರಿಗೆ ತೂಕದ ಖಾತೆಕೆ.ಎಚ್. ಮುನಿಯಪ್ಪ ಅವರಿಂದ ತೆರವಾದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ನೂತನ ಸಚಿವ ರಿಜ್ವಾನ್ ಅರ್ಷದ್ ಅವರಿಗೆ ನೀಡಲಾಗಿದೆ. ಹೊಸದಾಗಿ ಸಂಪುಟ ಸೇರಿರುವ ಲಕ್ಷ್ಮಣ ಸವದಿ ಅವರಿಗೆ ಕೃಷಿ ಮಾರುಕಟ್ಟೆ ಹೊರತುಪಡಿಸಿ ಸಹಕಾರ ಇಲಾಖೆ, ರುದ್ರಪ್ಪ ಲಮಾಣಿ ಅವರಿಗೆ ಸಕ್ಕರೆ ಮತ್ತು ಜವಳಿ, ಟಿ. ರಘು ಮೂರ್ತಿ ಅವರಿಗೆ ಪರಿಶಿಷ್ಟ ಪಂಡಗಳ ಕಲ್ಯಾಣ ಇಲಾಖೆ, ಡಾ. ಅಜಯ್ ಸಿಂಗ್ ಅವರಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ, ತಂತ್ರಜ್ಞಾನ ಇಲಾಖೆ, ಬಸವರಾಜ ರಾಯರಡ್ಡಿ ಅವರಿಗೆ ಉನ್ನತ ಶಿಕ್ಷಣ, ಶಿವಲಿಂಗೇಗೌಡ ಅವರಿಗೆ ಅಬಕಾರಿ, ಪುಟ್ಟರಂಗಶೆಟ್ಟಿ ಅವರಿಗೆ ವೆಂಕಟೇಶ್ ಅವರಿಂದ ತೆರವಾದ ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ, ವಿಜಯಾನಂದ ಕಾಶಪ್ಪನವರ್ ಅವರಿಗೆ ಸಣ್ಣ ಕೈಗಾರಿಕೆ ಜವಾಬ್ದಾರಿ ನೀಡಲಾಗಿದೆ.ಮೊದಲ ಬಾರಿಗೆ ಶಾಸಕರಾಗಿ ಮೊದಲ ಯತ್ನದಲ್ಲೇ ಸಂಪುಟ ಸೇರಿರುವ ಕೆ.ಎಸ್. ಬಸವಂತಪ್ಪ ಅವರಿಗೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳ ಸಾರಿಗೆ ಇಲಾಖೆಗಳ ಹೊಣೆ ವಹಿಸಲಾಗಿದೆ.ಹಾಲಿ ಸಚಿವರ ಬದಲಾದ ಖಾತೆಗಳು:ಸಿದ್ದರಾಮಯ್ಯ ಅವರ ಸಂಪುಟದಲ್ಲಿ ವಸತಿ, ಅಲ್ಪಸಂಖ್ಯಾತ ಹಾಗೂ ಹಜ್, ವಕ್ಫ್ ಖಾತೆಗಳನ್ನು ಹೊಂದಿದ್ದ ಬಿ.ಝಡ್. ಜಮೀರ್ ಅಹ್ಮದ್ಖಾನ್ ಅವರ ಬಳಿ ವಸತಿ ಖಾತೆ ಮಾತ್ರ ಉಳಿಸಲಾಗಿದೆ. ಉಳಿದಂತೆ ಅಲ್ಪಸಂಖ್ಯಾತ ಹಾಗೂ ಹಜ್, ವಕ್ಫ್ ಖಾತೆಯನ್ನು ಸಚಿವ ಯು.ಟಿ. ಖಾದರ್ ಅವರಿಗೆ ಆರೋಗ್ಯ ಇಲಾಖೆಯ ಜತೆ ಹೆಚ್ಚುವರಿಯಾಗಿ ವಹಿಸಲಾಗಿದೆ.ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದ ಚಲುವರಾಯಸ್ವಾಮಿ ಅವರಿಗೆ ರಾಮಲಿಂಗಾರೆಡ್ಡಿ ಅವರಿಂದ ತೆರವಾದ ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ ಹೊಣೆ ನೀಡಲಾಗಿದೆ.
ಸಿಎಂ ಬಳಿಯೇ ಉಳಿದ ಖಾತೆಗಳು:
ಪೌರ ಕಾರ್ಮಿಕ ದಂಪತಿ ಪುತ್ರನಿಗೆ 2 ಖಾತೆ:ಪೌರಕಾರ್ಮಿಕ ದಂಪತಿಯ ಪುತ್ರ ಕೆ.ಎಸ್.ಬಸವಂತಪ್ಪ ಅವರಿಗೆ ಎರಡು ಪ್ರಮುಖ ಖಾತೆಗಳ ಜವಾಬ್ದಾರಿ ನೀಡಲಾಗಿದೆ. ಮುಜರಾಯಿ ಹಾಗೂ ಬಂದರು, ಮೀನುಗಾರಿಕೆ, ಒಳನಾಡ ಸಾರಿಗೆ ವಹಿಸಲಾಗಿದೆ.