ಕನ್ನಡಪ್ರಭ ವಾರ್ತೆ ರಾಮನಗರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಡಾ.ಸಿ.ಎನ್ .ಮಂಜುನಾಥ್ ನೇತೃತ್ವದಲ್ಲಿ ಪೊಲೀಸ್ ಭವನದ ಎದುರಿನ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ತರುವಾಯ ನೋಂದಣಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜೂನ್ 29ರಂದು ಚುನಾವಣೆ ನಿಗದಿಯಾಗಿತ್ತು. ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಪೊಲೀಸ್ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಆ ಚುನಾವಣೆಯನ್ನು ಸಹಕಾರ ಸಂಘಗಳ ಉಪನಿಬಂಧಕರು ನಿಯೋಜಿಸಿದ್ದ ಚುನಾವಣಾಧಿಕಾರಿಗಳು ಮುಂದೂಡಿದ್ದರು.ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಶಾಂತಿ ಸಭೆ ನಡೆಸಲಾಯಿತು. ಆನಂತರ ಜುಲೈ 8ರಂದು ಚುನಾವಣೆ ನಿಗದಿ ಪಡಿಸಲಾಗಿತ್ತು. ಆದರೀಗ ಚುನಾವಣಾಧಿಕಾರಿಗಳೇ ಚುನಾವಣೆ ರದ್ದು ಪಡಿಸಿ ಗೈರಾಗಿದ್ದಾರೆ. ಇದರಿಂದ ಸಹಕಾರ ಸಂಘಗಳ ಅಧಿಕಾರಿಗಳು ಸಹಕಾರ ತತ್ವವನ್ನು ಗಾಳಿಗೆ ತೂರಿ ರಾಜಕಾರಣಿಗಳ ಒತ್ತಡಕ್ಕೆ ಮಣಿದಿರುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.
ಜೆಡಿಎಸ್ ಮುಖಂಡ ಉಮೇಶ್, ಜೆಡಿಎಸ್ ಮುಖಂಡ ಸಬ್ಬಕೆರೆ ಶಿವಲಿಂಗಯ್ಯ ಮಾತನಾಡಿ, ಹಳ್ಳಿಮಾಳ ಸೊಸೈಟಿ ಜೆಡಿಎಸ್ ವಶ ಆಗುತ್ತದೆ ಎಂಬ ಕಾರಣಕ್ಕೆ ಅಧ್ಯಕ್ಷರ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಇದರ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿರುವುದು ಸ್ಪಷ್ಟವಾಗಿದೆ. ಈವರೆಗೆ ಕ್ಷೇತ್ರದಲ್ಲಿ ಇಂತಹ ಕ್ಷುಲ್ಲಕ ರಾಜಕಾರಣ ನಡೆದಿರಲಿಲ್ಲ. ಕಾಂಗ್ರೆಸ್ ಶಾಸಕರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.ಚುನಾವಣೆ ನಡೆಸದಿದ್ದರೆ ಉಗ್ರ ಪ್ರತಿಭಟನೆ ಹಮ್ಮಕಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.