ವಿದ್ಯಾರ್ಥಿಗಳು, ಮುಖಂಡರ ಮೇಲೆ ದೌರ್ಜನ್ಯ ಖಂಡನೀಯ: ರೈ

KannadaprabhaNewsNetwork |  
Published : Jul 25, 2026, 02:45 AM IST
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ರಮಾನಾಥ ರೈ  ಮಾತನಾಡುತ್ತಿರುವುದು  | Kannada Prabha

ಸಾರಾಂಶ

ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಪ್ರಶ್ನಿಸುವ ಹಕ್ಕು ವಿಪಕ್ಷಕ್ಕಿದೆ. ವಿದ್ಯಾರ್ಥಿಗಳ ಬೇಡಿಕೆ ವಿಪಕ್ಷದ ಬೇಡಿಕೆಯೂ ಆಗಿದ್ದು, ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಹಾಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಮಂಗಳೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಪ್ರಶ್ನಿಸುವ ಹಕ್ಕು ವಿಪಕ್ಷಕ್ಕಿದೆ. ವಿದ್ಯಾರ್ಥಿಗಳ ಬೇಡಿಕೆ ವಿಪಕ್ಷದ ಬೇಡಿಕೆಯೂ ಆಗಿದ್ದು, ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಹಾಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮ ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಹಲ್ಲೆಗೆ ಸಹಾನುಭೂತಿ ವ್ಯಕ್ತಪಡಿಸಿ ಧರಣಿ ಕೂತವರನ್ನು ಅಪಹಾಸ್ಯ ಮಾಡುವುದು, ಅವರನ್ನು ದೇಶದ್ರೋಹಿಗಳು ಎಂದು ಬಿಂಬಿಸುವುದು ಆಡಳಿತ ಪಕ್ಷಕ್ಕೆ ಶೋಭೆ ತರುವಂಥದ್ದು ಅಲ್ಲ ಎಂದರು.ಚಹಾ ಅಂಗಡಿಗಳಲ್ಲಿ ಚರ್ಚಿಸಿ!: ನೀಟ್ ಪರೀಕ್ಷೆ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ 21 ವಿದ್ಯಾರ್ಥಿಗಳಲ್ಲಿ ಅಪಹಾಸ್ಯ ಮಾಡುತ್ತಿರುವವರ ಮಕ್ಕಳಿದ್ದರೆ ಏನು ಮಾಡುತ್ತಿದ್ದರು ಎಂಬುದನ್ನು ಅರಿತುಕೊಳ್ಳಬೇಕಿದೆ. ವಿದ್ಯಾರ್ಥಿಗಳ ಜೊತೆ ಪ್ರಧಾನಿ ಚಾಯ್‌ ಪೇ ಚರ್ಚೆ, ಮನ್ ಕೀ ಬಾತ್ ಮಾತನಾಡುತ್ತಾರೆ. ನೀಟ್ ಹಗರಣ, ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಪ್ರತಿಯೊಬ್ಬ ನಾಗರಿಕರು ಚಹಾ ಅಂಗಡಿಗಳಲ್ಲೂ ಚರ್ಚೆ ಮಾಡಬೇಕು. ಈ ಸರ್ಕಾರ ಏನು ತಪ್ಪು ಮಾಡುತ್ತಿದೆ ಎಂಬುದನ್ನು ಪ್ರತಿಯೊಬ್ಬರು ವಿಮರ್ಶೆ ಮಾಡಬೇಕಾದ ಅಗತ್ಯ ಇದೆ ಎಂದವರು ಹೇಳಿದರು.ಬೋಫೋರ್ಸ್ ಪ್ರಕರಣದ ಆರೋಪ ಬಂದಾಗ ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸರ್ಕಾರ ಜಂಟಿ ಸಂಸದೀಯ ಸಮಿತಿ ಮಾಡಿ ತನಿಖೆಗೆ ಕ್ರಮ ವಹಿಸಿತ್ತು. ಆದರೆ ಯುದ್ಧ ವಿಮಾನಗಳ ಹಗರಣ ಬಂದಾಗ ಪ್ರಸಕ್ತ ಸರ್ಕಾರ ಜಂಟಿ ಸಂಸದೀಯ ಸಮಿತಿಯನ್ನು ಒಪ್ಪಿಲ್ಲ. ಇವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆಯೇ ಇಲ್ಲ ಎಂದು ಅವರು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ದೇಶದಲ್ಲಿ ದೊಡ್ಡ ಹಗರಣ ಆಗಿರುವುದನ್ನು ಎಲ್ಲರೂ ಒಪ್ಪಬೇಕಾದ ವಿಚಾರ. ವಿದ್ಯಾರ್ಥಿಗಳ ಭವಿಷ್ಯವವನ್ನು ಮೊಟಕುಗೊಳಿಸುವ ರೀತಿಯಲ್ಲಿ ನಡೆದಿದೆ. ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ, ಪ್ರಿಯಾಂಕ ಪ್ರತಿಭಟನೆ ನಡೆಸಿದಾಗ ಅವರ ಮೇಲೆಯೂ ದಬ್ಬಾಳಿಕೆ ನಡೆಸಿರುವುದು ಖಂಡನೀಯ ಎಂದರು.ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರ ಕೇವಲ ನೀಟ್ ಪತ್ರಿಕೆ ಸೋರಿಕೆ ಮಾತ್ರವಲ್ಲ. ವಿದ್ಯಾರ್ಥಿಗಳೂ ಪ್ರಾಣ ಕಳೆದುಕೊಂಡಿದ್ದಾರೆ. ಹಾಗಿರುವಾಗ ಇಲ್ಲಿ ಅರಾಜಕತೆಯ ಪ್ರಶ್ನೆ ಹೇಗಾಗುತ್ತದೆ. ವಿಪಕ್ಷಗಳು ಹಿಂದೆ ಮಾಡಿದಾಗ ಇದನ್ನು ಹೇಳಿದ್ದೀರಾ, ಈ ಇದನ್ನು ಅರಾಜಕತೆ ಎಂದು ಹೇಗೆ ಹೇಳುತ್ತೀರಿ ಎಂದು ರಮಾನಾಥ ರೈ ಪ್ರಶ್ನಿಸಿದರು.

ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ, ಕೆಪಿಸಿಸಿ ಸದಸ್ಯ ಆರ್‌.ಕೆ.ಪೃಥ್ವಿರಾಜ್‌, ಬೂಡ ಅಧ್ಯಕ್ಷ ಬೇಬಿ ಕುಂದರ್‌, ಬ್ಲಾಕ್‌ ಅಧ್ಯಕ್ಷ ಪ್ರಕಾಶ್‌ ಸಾಲ್ಯಾನ್‌, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷ ಇಬ್ರಾಹಿಂ ನವಾಜ್‌, ಶಾಹುಲ್‌ ಹಮೀದ್‌, ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವಿಕಾಸ್‌ ಶೆಟ್ಟಿ, ಶಬೀರ್‌ ಸಿದ್ಧಕಟ್ಟೆ ಮತ್ತಿತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಯೋಜನೆ ತ್ವರಿತ ಅನುಷ್ಠಾನಗೊಳಿಸಿ: ಫೌಜಿಯಾ ತರನ್ನುಮ್
ಹಿರಿಯ ನಾಗರಿಕರಿಗೆ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ