ಹೋರಾಟ ಸಮಿತಿಯಿಂದ ಶ್ರೀಗಳಿಗೆ ಆಹ್ವಾನ
ಕಸ್ತೂರಿ ರಂಗನ್ ವರದಿ ಜಾರಿಗೆ ಹೊರಡಿಸಿರುವ ಕರಡು ಅಧಿಸೂಚನೆ ವಿರೋಧಿಸಿ ಬಾಳೆಹೊನ್ನೂರಿನಲ್ಲಿ ಗುರುವಾರ ನಡೆಯಲಿರುವ ಬಾಳೆಹೊನ್ನೂರು ಬಂದ್ ಹಾಗೂ ಪ್ರತಿಭಟನಾ ಸಭೆಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ಹೋರಾಟ ಸಮಿತಿಯಿಂದ ಮಂಗಳವಾರ ರಂಭಾಪುರಿ ಶ್ರೀಗಳನ್ನು ಭೇಟಿ ಮಾಡಿ ಮಲೆನಾಡಿಗೆ ಮಾರಕವಾದ ಕಸ್ತೂರಿ ರಂಗನ್ ವರದಿ ವಿರುದ್ಧದ ಪ್ರತಿಭಟನಾ ಸಭೆಗೆ ಆಹ್ವಾನ ನೀಡಿದ್ದು, ಸಭೆಯಲ್ಲಿ ಭಾಗವಹಿಸಿ ವರದಿಯ ವಿರುದ್ಧ ಮಾತನಾಡುವ ಭರವಸೆಯನ್ನು ಶ್ರೀಗಳು ಸಮಿತಿಗೆ ನೀಡಿದ್ದಾರೆ.ಈಸುದ್ದಿಗಾರರೊಂದಿಗೆ ಶ್ರೀಗಳು ಮಾತನಾಡಿ, ಕಸ್ತೂರಿ ರಂಗನ್ ವರದಿ ಜಾರಿಯಾದಲ್ಲಿ ಪಶ್ಚಿಮಘಟ್ಟ ಹಾಗೂ ಮಲೆನಾಡು ಪ್ರಾಂತ ಪ್ರದೇಶಗಳಿಗೆ ತೀವ್ರ ಸಂಕಷ್ಟ ಎದುರಾಗಲಿದೆ. ಈ ಕುರಿತು ಈ ಭಾಗದ ಜನರು ಸಂಘಟಿತರಾಗಿ ಹೋರಾಟ ಮಾಡ ಬೇಕಾದ ಅವಶ್ಯಕತೆಯಿದೆ. ಪ್ರಸ್ತುತ ವರದಿ ವಿರುದ್ಧ ಬಾಳೆಹೊನ್ನೂರು ಪಟ್ಟಣದಲ್ಲಿ ಆಯೋಜಿಸಿರುವ ಹೋರಾಟ ಸಮಯೋಚಿತವಾಗಿದೆ. ಈ ಹೋರಾಟಕ್ಕೆ ಶ್ರೀ ಜಗದ್ಗುರು ರಂಭಾಪುರಿ ಪೀಠ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ.
ಈ ಬಂದ್ ಮತ್ತು ಹೋರಾಟ ಸಭೆಯಲ್ಲಿ ಈ ಭಾಗದ ಎಲ್ಲಾ ರೈತರು, ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ರಾಜಕೀಯ ಬೇಧ ಮರೆತು ಭಾಗವಹಿಸಿ ಯಶಸ್ವಿಗೊಳಿಸುವಂತೆ ಶ್ರೀಗಳು ತಿಳಿಸಿದ್ದಾರೆ.
ಬಾಳೆಹೊನ್ನೂರಲ್ಲಿ ಗುರುವಾರ ನಡೆಯಲಿರುವ ಬಂದ್ ಹಾಗೂ ಪ್ರತಿಭಟನಾ ಸಭೆಗೆ ಭಾಗವಹಿಸುವಂತೆ ಕೋರಿ ಹೋರಾಟ ಸಮಿತಿಯಿಂದ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳಿಗೆ ಆಹ್ವಾನ ನೀಡಲಾಯಿತು.