ರಂಜಾನ್ ಸಾಮರಸ್ಯದ ಪ್ರತೀಕ: ದೊಡ್ಡನಗೌಡ ಪಾಟೀಲ

KannadaprabhaNewsNetwork |  
Published : Apr 01, 2025, 12:47 AM IST
ಪೋಟೋ31ಕೆಎಸಟಿ1: ಕುಷ್ಟಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮಾಜದ ಬಂಧುಗಳು ರಂಜಾನ್ ಹಬ್ಬದ ಅಂಗವಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು | Kannada Prabha

ಸಾರಾಂಶ

ಮುಸ್ಲಿಮರು ಪ್ರತಿ ವರ್ಷವೂ ಸಹಿತ ರಂಜಾನ್ ಹಬ್ಬದ ಅಂಗವಾಗಿ ಒಂದು ತಿಂಗಳು ಉಪವಾಸ ಮಾಡುವ ಮೂಲಕ ಧರ್ಮದ ಶ್ರೇಷ್ಟತೆ ಕಾಪಾಡಿಕೊಂಡು ಬರುತ್ತಿದ್ದಾರೆ

ಕುಷ್ಟಗಿ: ಮುಸಲ್ಮಾನರ ಪವಿತ್ರ ರಂಜಾನ್ ಹಬ್ಬವೂ ಸಾಮರಸ್ಯದ ಪ್ರತೀಕವಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಅಭಿಪ್ರಾಯಪಟ್ಟರು.

ಪಟ್ಟಣದ ಗಜೇಂದ್ರಗಡ ರಸ್ತೆಯ ಸಂದೀಪ ನಗರದಲ್ಲಿನ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಂಧುಗಳು ಪ್ರಾರ್ಥನೆ ಸಲ್ಲಿಸಿದರು. ನಂತರ ಶುಭಾಷಯ ತಿಳಿಸಿ ಅವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಮುಸ್ಲಿಮರು ಪ್ರತಿ ವರ್ಷವೂ ಸಹಿತ ರಂಜಾನ್ ಹಬ್ಬದ ಅಂಗವಾಗಿ ಒಂದು ತಿಂಗಳು ಉಪವಾಸ ಮಾಡುವ ಮೂಲಕ ಧರ್ಮದ ಶ್ರೇಷ್ಟತೆ ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ ಮಾತನಾಡಿ, ಮುಸಲ್ಮಾನ ಬಂಧುಗಳಿಗೆ ಈ ರಂಜಾನ್ ಹಬ್ಬವು ಪವಿತ್ರ ಹಬ್ಬವಾಗಿದ್ದು, ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ ಎಂದರು.

ಕಾಡಾ ನಿಗಮದ ಅಧ್ಯಕ್ಷ ಹಸನಸಾಬ್‌ ದೋಟಿಹಾಳ ಮಾತನಾಡಿದರು, ಈ ಸಂದರ್ಭ ಮಾಜಿ ಶಾಸಕ ಕೆ.ಶರಣಪ್ಪ ವಕೀಲರು, ಪುರಸಭೆ ಅಧ್ಯಕ್ಷ ಮಹಾಂತೇಶ ಕಲ್ಲಬಾವಿ, ಸೋಮಶೇಖರ ವೈಜಾಪೂರ, ಪರಶುರಾಮ ನಾಗರಾಳ, ಶೇಖರಗೌಡ ಮಾಲಿಪಾಟೀಲ,ನಹೀಮ್, ಜೀವನಸಾಬ ಬಿನ್ನಾಳ, ಖಾದರಸಾಬ ಅತ್ತಾರ, ರಹೀಂಸಾಬ, ಮುರ್ತುಜಾ ಪೇಂಟರ್, ಆಲಾಂಪಾಷಾ ಮೋದಿ, ಅಫ್ತಾಭ್, ನಬಿಸಾಬ ಕುಷ್ಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''