ರಾಣೆಬೆನ್ನೂರು ಪೈಲ್ವಾನ್ ಕಾರ್ತಿಕ್ ಕಾಟೆಗೆ ಕುಸ್ತಿ ಕಿರೀಟ

KannadaprabhaNewsNetwork |  
Published : Apr 29, 2026, 02:00 AM IST
ಭದ್ರಾವತಿ ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ `ಊರ ಹಬ್ಬ ಅಂಗವಾಗಿ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ರಾಣೆಬೆನ್ನೂರು ಕುಸ್ತಿಪಟು ಫೈಲ್ವಾನ್ ಕಾರ್ತಿಕ್ ಕಾಟೆ ಮೊದಲ ಬಹುಮಾನದೊಂದಿಗೆ ಬೆಳ್ಳಿಗದೆ ತಮ್ಮದಾಗಿಸಿಕೊಂಡಿದ್ದಾರೆ. | Kannada Prabha

ಸಾರಾಂಶ

ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ ‘ಊರ ಹಬ್ಬ’ ಅಂಗವಾಗಿ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ರಾಣೆಬೆನ್ನೂರು ಕುಸ್ತಿಪಟು ಫೈಲ್ವಾನ್ ಕಾರ್ತಿಕ್ ಕಾಟೆ ಮೊದಲ ಬಹುಮಾನದೊಂದಿಗೆ ಬೆಳ್ಳಿಗದೆ ತಮ್ಮದಾಗಿಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಭದ್ರಾವತಿ

ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮದೇವಿ ಜಾತ್ರಾ ಮಹೋತ್ಸವ ‘ಊರ ಹಬ್ಬ’ ಅಂಗವಾಗಿ ಕನಕಮಂಟಪ ಮೈದಾನದಲ್ಲಿ ೩ ದಿನಗಳ ಕಾಲ ಆಯೋಜಿಸಲಾಗಿದ್ದ ರಾಷ್ಟ್ರ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ರಾಣೆಬೆನ್ನೂರು ಕುಸ್ತಿಪಟು ಫೈಲ್ವಾನ್ ಕಾರ್ತಿಕ್ ಕಾಟೆ ಮೊದಲ ಬಹುಮಾನದೊಂದಿಗೆ ಬೆಳ್ಳಿಗದೆ ತಮ್ಮದಾಗಿಸಿಕೊಂಡಿದ್ದಾರೆ.

ಕೊನೆಯ ಅಂತಿಮ ಪಂದ್ಯದಲ್ಲಿ ಕಾರ್ತಿಕ್ ಕಾಟೆ ಮಹಾರಾಷ್ಟ್ರದ ಕುಸ್ತಿಪಟು ಫೈಲ್ವಾನ್ ಸುದೇಶ್ ಠಾಕೂರ್ ಅವರನ್ನು ಪರಾಭವಗೊಳಿಸಿ ಮೊದಲ ಬಹುಮಾನ ೧ ಲಕ್ಷ ರು. ನಗದು ಹಾಗು ಬೆಳ್ಳಿಗದೆ ಪಡೆದರು. ನಗರಸಭೆ ಆಡಳಿತ ಈ ಬೆಳ್ಳಿಗದೆ ದಾನಿಯಾಗಿದ್ದು, ಉಳಿದಂತೆ ದಾವಣಗೆರೆ ಕುಸ್ತಿಪಟು ಫೈಲ್ವಾನ್ ಬಸವರಾಜ್ ಪಾಟೀಲ್ ಮಹಾರಾಷ್ಟ್ರದ ಕುಸ್ತಿಪಟು ಫೈಲ್ವಾನ್ ಶೈಲೇಶ್ ಅವರನ್ನು ಪರಾಭವಗೊಳಿಸಿ ಎರಡನೇ ಬಹುಮಾನ ೫೦ ಸಾವಿರ ರು. ನಗದು ಪಡೆದರು.

ಮಹಾರಾಷ್ಟ್ರದ ಕುಸ್ತಿಪಟು ಫೈಲ್ವಾನ್ ಪ್ರದೀಪ್ ಠಾಕೂರ್ ಅವರು ಬೆಳಗಾವಿ ಕುಸ್ತಿಪಟು ಪ್ರಕಾಶ್ ಪಾಟೀಲ್ ಅವರನ್ನು ಪರಾಭವಗೊಳಿಸಿ ೩ನೇ ಬಹುಮಾನ ೪೦ ಸಾವಿರ ರು. ನಗದು ಹಾಗು ಬೆಳ್ಳಿಗದೆ ತಮ್ಮದಾಗಿಸಿಕೊಂಡರು. ನಗರಸಭೆ ಸದಸ್ಯೆ ಶಶಿಕಲಾ ನಾರಾಯಣಪ್ಪ ಈ ಬೆಳ್ಳಿಗದೆ ದಾನಿಗಳಾಗಿದ್ದಾರೆ.

ಪಂದ್ಯಾವಳಿಯಲ್ಲಿ ಒಟ್ಟು ೧೮೨ ಕುಸ್ತಿಗಳನ್ನು ಆಡಿಸಲಾಯಿತು. ರಾಜ್ಯದ ಬೆಳಗಾವಿ. ಬಿಜಾಪುರ. ಗದಗ, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಹರಿಹರ, ಶಿವಮೊಗ್ಗ, ಬೆಂಗಳೂರು, ಚಿತ್ರದುರ್ಗ ಮತ್ತು ಮಹಾರಾಷ್ಟ್ರದ ಸಾಂಗ್ಲಿ. ಕೊಲ್ಲಾಪುರ ಮತ್ತು ಮಧ್ಯ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಕುಸ್ತಿಪಟುಗಳು ಆಗಮಿಸಿದ್ದರು.

ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಕುಸ್ತಿ ಪಂದ್ಯಾವಳಿ ಸಹ ಒಂದು ಪ್ರಮುಖ ಆಕರ್ಷಣೆಯಾಗಿದ್ದು, ಕುಸ್ತಿ ಪಂದ್ಯಾವಳಿ ಆಯೋಜನೆ ಒಂದು ರೀತಿ ಸಂಪ್ರದಾಯದ ಆಚರಣೆಯಾಗಿ ರೂಪುಗೊಂಡಿದೆ.

ಕಳೆದ ಮೂರು ದಿನಗಳಿಂದ ನಡೆದ ಕುಸ್ತಿ ಪಂದ್ಯಾವಳಿ ಯಶಸ್ವಿಯಾಗಲು ಕಾರಣಕರ್ತರಾದ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ಸಮಾಜ ಸೇವಕ ಸಿ. ಮಹೇಶ್ ಕುಮಾರ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಯುವ ಮುಖಂಡ ಮಂಗೋಟೆ ರುದ್ರೇಶ್, ನಗರಸಭೆ ಸದಸ್ಯರು, ಸಿಬ್ಬಂದಿಗೆ, ವಿವಿಧ ಸಂಘ-ಸಂಸ್ಥೆಗಳಿಗೆ, ರಾಜಕೀಯ ಪಕ್ಷಗಳಿಗೆ ಸರ್ಕಾರದ ವಿವಿಧ ಇಲಾಖೆಗಳಿಗೆ ಗ್ರಾಮ ದೇವತೆ ಶ್ರೀ ಹಳದಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಪಿಎಂಇ ನೋಂದಣಿ ಇಲ್ಲದೆ ಕ್ಲಿನಿಕ್ ಆರಂಭಿಸಿದರೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್
ಮೋದಿ ಭಯೋತ್ಪಾದ ಹೇಳಿಕೆ: ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ