ರಾಣಿ ಚನ್ನಮ್ಮ ಮೂರ್ತಿ ಶೀಘ್ರ ಅನಾವರಣಗೊಳಿಸಿ

KannadaprabhaNewsNetwork |  
Published : Dec 09, 2025, 03:15 AM IST
ವಿಜಯಪುರ  | Kannada Prabha

ಸಾರಾಂಶ

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರ ರಾಣಿ ಚನ್ನಮ್ಮ ಮೂರ್ತಿಯನ್ನು ಕೂಡಲೇ ಅನಾವರಣಗೊಳಿಸುವಂತೆ ಕಿತ್ತೂರು ಚನ್ನಮ್ಮ ಮೂರ್ತಿ ಅನಾವರಣ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರ ರಾಣಿ ಚನ್ನಮ್ಮ ಮೂರ್ತಿಯನ್ನು ಕೂಡಲೇ ಅನಾವರಣಗೊಳಿಸುವಂತೆ ಕಿತ್ತೂರು ಚನ್ನಮ್ಮ ಮೂರ್ತಿ ಅನಾವರಣ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ದೇಶ ಕಂಡ ವೀರ ಮಹಿಳೆ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿಯನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ಥಾಪಿಸಿರುವುದು ಶ್ಲಾಘನೀಯ. ಆದರೆ ಕಳೆದ 3 ವರ್ಷಗಳಾದರೂ ಮೂರ್ತಿ ಅನಾವರಣ ಗೊಳ್ಳದಿರುವುದು ರಾಣಿ ಚನ್ನಮ್ಮಳ, ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ನೋವು ತಂದಿದೆ. ಆದ್ದರಿಂದ ಆದಷ್ಟು ಬೇಗನೆ ಮೂರ್ತಿಯನ್ನು ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಅನಾವರಣ ಮಾಡುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು ಎಂದು ಸಮಿತಿಯವರು ಆಗ್ರಹಿಸಿದರು.

ಚನ್ನಮ್ಮಳ ಮೂರ್ತಿ ಸುತ್ತಲೂ ಅಸ್ವಚ್ಛತೆಯಿಂದ ಕೂಡಿದ್ದು, ನಾಯಿ-ನರಿಗಳ ಆಶ್ರಯತಾಣವಾಗಿದೆ. ಇದು ರಾಷ್ಟ್ರ ನಾಯಕಿಗೆ ಮಾಡುತ್ತಿರುವ ಘೋರ ಅಪಮಾನ. ಈ ವಿಳಂಬ ನೀತಿ ಕೈಬಿಟ್ಟು, ಅಭಿಮಾನಿಗಳ ಹಾಗೂ ಸಾರ್ವಜನಿಕರ ಸಹನೆ ಪರೀಕ್ಷಿಸಬಾರದು. ಈ ವಿಷಯವನ್ನು ರಾಜಕೀಯಕರಣಗೊಳಿಸದೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆದಷ್ಟು ಬೇಗನೆ ಮೂರ್ತಿ ಅನಾವರಣಗೊಳಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹಾಗೂ ನಗರ ಶಾಸಕ ಶ್ರೀ ಬಸನಗೌಡ ಪಾಟೀಲ ಯತ್ನಾಳಗೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಎಸ್.ಬಿ.ಪಾಟೀಲ, ಎಂ.ಎಸ್.ಪಾಟೀಲ ಕೋರಳ್ಳಿ, ನ್ಯಾಯವಾದಿ ದಾನೇಶ ಅವಟಿ, ಡಾ.ಆನಂದ ಜಿ.ಕುಲಕರ್ಣಿ, ಪರಿಸರವಾದಿ ಅಂಬಾದಾಸ ಜೋಶಿ, ನಾಗರಾಜ ಬಿರಾದಾರ, ಸಚಿನಗೌಡ ಪಾಟೀಲ ಕೋರವಾರ, ಬಸವರಾಜ ಜಾನರೆಡ್ಡಿ, ಗುರುಪಾದಪ್ಪ ಓಜಿ, ವಿಜಯಕುಮಾರ ಜಾಬಾ, ನ್ಯಾಯವಾದಿಗಳಾದ ಎಸ್.ಎಂ.ಪೊಲೀಸ್ ಪಾಟೀಲ, ಎಸ್.ಎಂ.ಪೊಲೀಸ್‌ಪಾಟೀಲ, ಸಿ.ಎಂ.ಗಬ್ಬೂರ, ಎಂ.ಎಸ್.ಬಗಲಿ, ಆರ್.ಎಂ.ಮಣೂರ, ಡಾ.ಶಶಿಕಾಂತ ಸಕ್ರಿ, ಸುರೇಶಗೌಡ ಪಾಟೀಲ, ಪಾರೀಶ ಶಿರಹಟ್ಟಿ ಸೇರಿದಂತೆ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ : ಸಿಎಂ ಸಿದ್ದರಾಮಯ್ಯ
ಸಿಎಂ ರೇಸಲ್ಲಿ ಡಿಕೆ ಒಬ್ಬರೇ ಇಲ್ಲ : ರಾಜಣ್ಣ