ಕಳೆದ ವರ್ಷವೂ ಸ್ವಿಟ್ಜರ್‌ಲ್ಯಾಂಡ್‌ ಗೆ ಹೋಗುವುದಾಗಿ ಹೇಳಿ ಕೇಜಿಗಟ್ಟಲೇ ಚಿನ್ನ ಸಾಗಿಸಿದ್ದ ರನ್ಯಾ ರಾವ್‌

KannadaprabhaNewsNetwork |  
Published : Mar 13, 2025, 01:45 AM ISTUpdated : Mar 13, 2025, 07:10 AM IST
Ranya Rao

ಸಾರಾಂಶ

ನಟಿ ರನ್ಯಾರಾವ್‌ ಅವರು ಕಳೆದ ವರ್ಷ ಸ್ವಿಟ್ಜರ್‌ಲ್ಯಾಂಡ್‌ ಗೆ ಹೋಗುವುದಾಗಿ ಹೇಳಿ ದುಬೈನಿಂದ ಬೆಂಗಳೂರಿಗೆ ಕೆಜಿಗಟ್ಟಲೇ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು ಎಂಬ ಸಂಗತಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)ದ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

  ಬೆಂಗಳೂರು : ನಟಿ ರನ್ಯಾರಾವ್‌ ಅವರು ಕಳೆದ ವರ್ಷ ಸ್ವಿಟ್ಜರ್‌ಲ್ಯಾಂಡ್‌ ಗೆ ಹೋಗುವುದಾಗಿ ಹೇಳಿ ದುಬೈನಿಂದ ಬೆಂಗಳೂರಿಗೆ ಕೆಜಿಗಟ್ಟಲೇ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು ಎಂಬ ಸಂಗತಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)ದ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ದುಬೈನಲ್ಲಿ 2024ರ ಡಿಸೆಂಬರ್‌ 13 ಹಾಗೂ 20 ರಂದು ಪ್ರತ್ಯೇಕವಾಗಿ ಎರಡು ಬಾರಿ ಕೋಟ್ಯಂತರ ರು. ಮೌಲ್ಯದ ಚಿನ್ನವನ್ನು ರನ್ಯಾ ಖರೀದಿಸಿದ್ದರು. ಬಳಿಕ, ಆ ಚಿನ್ನವನ್ನು ಸಾಗಿಸುವಾಗ ಅಲ್ಲಿನ ವಿಮಾನ ನಿಲ್ದಾಣದಲ್ಲಿ ತಾವು ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾಕ್ಕೆ ಹೋಗುವುದಾಗಿ ಸುಳ್ಳು ಹೇಳಿಕೆ ಕೊಟ್ಟಿದ್ದರು. ಆದರೆ ಅಲ್ಲಿಗೆ ಹೋಗದೆ ಅವರು ಬೆಂಗಳೂರಿನ ವಿಮಾನ ಹತ್ತಿದ್ದರು. ಹೀಗಾಗಿ ದುಬೈ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳನ್ನು ಆಕೆ ಕಣ್ತಪ್ಪಿಸಿದ್ದಾರೆ ಎಂದು ಡಿಆರ್‌ಐ ಹೇಳಿದೆ.

ರನ್ಯಾ ಅವರು ನಿರಂತರವಾಗಿ ವಿದೇಶಕ್ಕೆ ತೆರಳುತ್ತಿದ್ದರು. ಕಳೆದ ವರ್ಷ ಆರು ತಿಂಗಳು ಬಹುತೇಕ ವಿದೇಶ ಪ್ರಯಾಣದಲ್ಲೇ ಕಾಲ ಕಳೆದಿದ್ದರು. ಈ ವೇಳೆ ದುಬೈನಲ್ಲಿ ಎರಡು ಬಾರಿ ಚಿನ್ನ ಖರೀದಿಸಿ ಅಲ್ಲಿನ ಅಧಿಕಾರಿಗಳ ಮುಂದೆ ತೆರಿಗೆ ಘೋಷಿಸಿದ್ದರು. ನಂತರ ಕಳ್ಳ ಮಾರ್ಗದಲ್ಲಿ ಬೆಂಗಳೂರಿಗೆ ಚಿನ್ನ ತಂದಿದ್ದರು. ಈಗಲೂ ಸಹ ಅದೇ ರೀತಿ ದುಬೈನಲ್ಲಿ ಅಧಿಕಾರಿಗಳಿಗೆ ಸುಳ್ಳು ಹೇಳಿ ಮತ್ತೆ ಬೆಂಗಳೂರಿಗೆ 14 ಕೆಜಿ ಚಿನ್ನ ಸಾಗಿಸಿರುವ ಬಗ್ಗೆ ಶಂಕೆ ಇದೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಡಿಆರ್‌ಐ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ