ಸೆ.೧೪ರಂದು ರಾಷ್ಟ್ರೀಯ ಜನತಾ ಅದಾಲತ್‌

KannadaprabhaNewsNetwork |  
Published : Jul 31, 2024, 01:05 AM IST
೩೦ಕೆಎಲ್‌ಆರ್-೧ಕೋಲಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆ.೧೪ ರಂದು ರಾಷ್ಟ್ರೀಯ ಜನತಾ ನ್ಯಾಯಾಲಯ ನಡೆಯಲಿರುವ ಕುರಿತು  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ  ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ ಮಂಜುನಾಥ ಮಾಧ್ಯಮಗಳಿಗೆ ಮಾಹಿತಿ ನೀಡಿದರು. | Kannada Prabha

ಸಾರಾಂಶ

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದು

ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆ.೧೪ ರಂದು ರಾಷ್ಟ್ರೀಯ ಜನತಾ ನ್ಯಾಯಾಲಯ ನಡೆಯಲಿದ್ದು, ರಾಜೀ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಮುಂದಾಗುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎ ಮಂಜುನಾಥ ಸಲಹೆ ನೀಡಿದರು.ನಗರದ ನ್ಯಾಯಾಲಯದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ತಿಳಿಸಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಇವರ ನಿರ್ದೇನದಂತೆ ಕೋಲಾರ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಮುಳಬಾಗಿಲು ಮತ್ತು ಕೆ.ಜಿ.ಎಫ್ ತಾಲ್ಲೂಕು ನ್ಯಾಯಾಲಯಗಳಲ್ಲಿ ಸೆ.೧೪ ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಅವಕಾಶವಿದೆ ಎಂದರು.

ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಸಿವಿಲ್ ಪ್ರಕರಣಗಳು, ರಾಜೀಯಾಗುವ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕೇಮುಗಳು, ವೈವಾಹಿಕ-ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಚೇದನೆಯನ್ನು ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಮಾಡಿಕೊಳ್ಳುವ ಅವಕಾಶವಿದೆ ಎಂದರು.

ರಾಜೀ ಸಂಧಾನದ ಮೂಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ ಎಸ್ ಹೊಸಮನಿ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ