ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ 44093 ಪ್ರಕರಣ ಇತ್ಯರ್ಥ

KannadaprabhaNewsNetwork |  
Published : Sep 15, 2024, 01:53 AM IST
ಲೋಕಅದಾಲತ್‌ | Kannada Prabha

ಸಾರಾಂಶ

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ 32, ಚೆಕ್ಕು ಅಮಾನ್ಯ ಪ್ರಕರಣ 273, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ 11, ಎಂ.ವಿ.ಸಿ. ಪ್ರಕರಣ 86, ವೈವಾಹಿಕ ಪ್ರಕರಣ 3, ಸಿವಿಲ್ ಪ್ರಕರಣ 151, ಇತರೇ ಕ್ರಿಮಿನಲ್ ಪ್ರಕರಣ 2459 ಹಾಗೂ ವ್ಯಾಜ್ಯ ಪೂರ್ವ ದಾವೆ 41078 ಸೇರಿದ್ದವು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ವಿವಿಧ ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಿ ಒಂದೇ ದಿನ ಒಟ್ಟು 44093 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ 27,46,21,144 ರು. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.ಈ ಪ್ರಕರಣಗಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ 32, ಚೆಕ್ಕು ಅಮಾನ್ಯ ಪ್ರಕರಣ 273, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ 11, ಎಂ.ವಿ.ಸಿ. ಪ್ರಕರಣ 86, ವೈವಾಹಿಕ ಪ್ರಕರಣ 3, ಸಿವಿಲ್ ಪ್ರಕರಣ 151, ಇತರೇ ಕ್ರಿಮಿನಲ್ ಪ್ರಕರಣ 2459 ಹಾಗೂ ವ್ಯಾಜ್ಯ ಪೂರ್ವ ದಾವೆ 41078 ಸೇರಿದ್ದವು.

ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ನು ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣನವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ