ವೈಚಾರಿಕತೆ ರೂಢಿಸುವುದು ವಿಜ್ಞಾನದ ಪ್ರಮುಖ ಆಶಯ: ರತ್ನಕುಮಾರ್‌

KannadaprabhaNewsNetwork |  
Published : Jan 28, 2024, 01:17 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್  | Kannada Prabha

ಸಾರಾಂಶ

ಸಮುದಾಯದಲ್ಲಿ ವೈಚಾರಿಕತೆ ಮೂಡಿಸುವುದು ವಿಜ್ಞಾನದ ಪ್ರಮುಖ ಆಶಯ.

ಚಿತ್ರದುರ್ಗ: ಸಮುದಾಯದಲ್ಲಿ ವೈಚಾರಿಕತೆ ಮೂಡಿಸುವುದು ವಿಜ್ಞಾನದ ಪ್ರಮುಖ ಆಶಯವೆಂದು ಇಸ್ರೋ ಹಿರಿಯ ವಿಜ್ಞಾನಿ ಶ್ರೀನಾಥ ರತ್ನಕುಮಾರ ಅಭಿಪ್ರಾಯಪಟ್ಟರು.

ಇಲ್ಲಿನ ವಿದ್ಯಾವಿಕಾಸ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಸೈನ್ಸ್ ಫೌಂಡೇಷನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಯಾವುದು ವಿಜ್ಞಾನ, ಯಾವುದು ಮೌಢ್ಯ, ಯಾವುದು ಮೌಢ್ಯ ಅಲ್ಲ ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು ಎಂದರು.

ಗ್ರಾಮೀಣ ಭಾಗಕ್ಕೆ ವಿಜ್ಞಾನವನ್ನು ಹೆಚ್ಚು ತಲುಪಿಸಬೇಕಾದ ತುರ್ತು ಅಗತ್ಯವಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರಕ್ಕೆ ನುಗ್ಗಬೇಕು. ಇಸ್ರೋದಲ್ಲಿ ವಿಜ್ಞಾನಿಗಳನ್ನು ಪ್ರತಿ ವರ್ಷವೂ ನೇಮಕ ಮಾಡಿಕೊಳ್ಳಲಾಗುವುದು. 196 ಖಾಸಗಿ ಸಂಸ್ಥೆಗಳು ಹುಟ್ಟಿಕೊಂಡಿವೆ. ವಿಜ್ಞಾನ ಎಲ್ಲರಿಗೂ ಉಪಯೋಗವಾಗುವುದಲ್ಲದೆ ವೈಚಾರಿಕತೆಯನ್ನು ತಿಳಿಸಿ ಕೊಡುತ್ತದೆ. ಚಿತ್ರದುರ್ಗ ಸೈನ್ಸ್ ಫೌಂಡೇಷನ್ ಯಶಸ್ವಿಯಾಗಲಿ. ಅದಕ್ಕೆ ನನ್ನ ಸಹಕಾರವಿದೆ ಎಂದರು.

75 ವರ್ಷದಲ್ಲಿ ವಿಜ್ಞಾನ, ನಗರ ಪ್ರದೇಶದಿಂದ ಗ್ರಾಮೀಣ ಭಾಗಕ್ಕೆ ಹೊರಳುತ್ತಿದೆ. ಚಳ್ಳಕೆರೆ ಸಮೀಪ ಹಳ್ಳಿಯಲ್ಲಿ ಇಸ್ರೋ ಇದೆ. ಚಂದ್ರಯಾನ-2, ಚಂದ್ರಯಾನ-3 ಯಶಸ್ವಿಗೆ ಕೊಡುಗೆ ಕೊಟ್ಟಿದೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಬೆಂಗಳೂರಿನ ಸಮೀಪದ ಹೊಸಕೋಟೆಯಲ್ಲಿ ಕುಳಿತು ವಿಜ್ಞಾನದ ದತ್ತಾಂಶಗಳನ್ನು ತೆಗೆದುಕೊಳ್ಳುವಷ್ಟು ವಿಜ್ಞಾನ ಮುಂದುವರೆದಿದೆ. ವೈಜ್ಞಾನಿಕ ಸಾಮಾಜಿಕ ತಿಳುವಳಿಕೆ ಪ್ರತಿಯೊಬ್ಬರಲ್ಲಿಯೂ ಮೂಡಿ ಗ್ರಾಮೀಣ ಜನತೆಯಲ್ಲಿ ವಿಜ್ಞಾನ-ತಂತ್ರಜ್ಞಾನ ಗೊತ್ತಾಗಬೇಕು ಎಂದು ಶ್ರೀನಾಥ ರತ್ನಕುಮಾರ ನುಡಿದರು.

ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಮಾತನಾಡಿ, ಚಿತ್ರದುರ್ಗದಲ್ಲಿ ಈಗಾಗಲೇ 8-10 ವಿಜ್ಞಾನ ಸಂಸ್ಥೆಗಳು ಕೆಲಸ ಮಾಡುತ್ತಿವೆ. ವಿಭಿನ್ನವಾದ ವಿಜ್ಞಾನ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕೆಲಸ ಮಾಡಬೇಕೆಂಬ ಉದ್ದೇಶದಿಂದ ಚಿತ್ರದುರ್ಗ ಸೈನ್ಸ್ ಫೌಂಡೇಷನ್ ಹುಟ್ಟು ಹಾಕಲಾಗಿದೆ. 7 ಜನ ಸಮಾನ ಮನಸ್ಕರು ಸೇರಿ ಕಟ್ಟಿರುವ ಈ ಫೌಂಡೇಷನ್‍ನಿಂದ ವಿಜ್ಞಾನ ಚಟುವಟಿಕೆಗೆ ಹೊಸ ಆಯಾಮ ಕೊಡಬೇಕೆಂಬುದು ನಮ್ಮ ಗುರಿ. ವಿಜ್ಞಾನ ಚಟುವಟಿಕೆಗಳನ್ನು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತಲುಪಿಸಬೇಕು. ಎಲ್ಲರೂ ಸೇರಿ ಹೊಸ ವಿಜ್ಞಾನ ಲೋಕ ಕಟ್ಟೋಣ. ಇದರಲ್ಲಿ ವಿಜ್ಞಾನ ಶಿಕ್ಷಕರುಗಳು ಸದಸ್ಯರಾಗಬಹುದು ಎಂದು ಹೇಳಿದರು.

ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ವಿಜಯ ಕುಮಾರ್ ಮಾತನಾಡಿ, ವಿಜ್ಞಾನಕ್ಕೆ ಸಂಬಂಧಿಸಿದಂತೆ ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ನಮ್ಮ ಶಾಲೆಯಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಲು ನಾನು ಸದಾ ಸಿದ್ದ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ವಿಜ್ಞಾನದ ಕುರಿತು ಹೆಚ್ಚಿನ ಜ್ಞಾನ ಮೂಡಿಸುವ ಕೆಲಸ ಚಿತ್ರದುರ್ಗ ಸೈನ್ಸ್ ಫೌಂಡೇಷನ್ ಮಾಡುವಂತಾಗಲಿ ಎಂದು ಹಾರೈಸಿದರು.

ಬಿಆರ್.ಸಿ. ಸಂಪತ್‍ಕುಮಾರ್, ಚಿತ್ರದುರ್ಗ ಸೈನ್ಸ್ ಫೌಂಡೇಷನ್‍ನ ಉಪಾಧ್ಯಕ್ಷ ಚಳ್ಳಕೆರೆ ಯರ್ರಿಸ್ವಾಮಿ, ಖಜಾಂಚಿ ಕೆ.ವಿ.ನಾಗೇಂದ್ರರೆಡ್ಡಿ, ನಿರ್ದೇಶಕರುಗಳಾದ ಈ.ರುದ್ರಮುನಿ, ಎಚ್.ಮಂಜುನಾಥ್, ಟಿ.ರಮೇಶ್ ವೇದಿಕೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಕನಿಷ್ಠ ಆದಾಯ ಮಿತಿ 3 ಲಕ್ಷ ರು.ಗೆ ಏರಿಕೆ: ಮುನಿಯಪ್ಪ
ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ