ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಹಾನಿಯಾಗಿದ್ದ ಮನೆಗೆ ರವೀಂದ್ರ ಶ್ರೀಕಂಠಯ್ಯ ಭೇಟಿ

KannadaprabhaNewsNetwork |  
Published : May 11, 2026, 01:45 AM IST
10ಕೆಎಂಎನ್ ಡಿ13 | Kannada Prabha

ಸಾರಾಂಶ

ಈ ವೇಳೆ ಘಟನೆ ಮಾಹಿತಿ ಪಡೆದ 25 ರಿಂದ 30 ನಿಮಿಷಗಳ ನಂತರ ಶ್ರೀರಂಗಪಟ್ಟಣದಿಂದ ಅಗ್ನಿಶಾಮಕ ದಳ ವಾಹನ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದೆ. ಅಷ್ಟರಲ್ಲಾಗಲೇ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಹೋಬಳಿ ಕೇಂದ್ರಗಳಲ್ಲಿ ಕನಿಷ್ಠ ಒಂದು ಅಗ್ನಿಶಾಮಕ ವಾಹನ ಇದ್ದಿದ್ದರೆ ಇಂತಹ ಘಟನೆಯಿಂದ ಹೆಚ್ಚಿನ ಅವಘಡ ತಪ್ಪಿಸಬಹುದು ಎಂದು ಗ್ರಾಮಸ್ಥರು ತಮ್ಮ ಸಮಸ್ಯೆ ತೋಡಿಕೊಂಡರು.

ಶ್ರೀರಂಗಪಟ್ಟಣ: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದ ತಾಲೂಕಿನ ಅರಕೆರೆ ಗ್ರಾಮದ ಪುಟ್ಟೇಗೌಡರ ಮನೆಗೆ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ಮಾಡಿ ಸಂತ್ರಸ್ತರಿಗೆ ಧೈರ್ಯ ಹೇಳಿದರು.

ಶುಕ್ರವಾರ ರಾತ್ರಿ ಗ್ಯಾಸ್ ಸ್ಪೋಟಗೊಂಡ ಪರಿಣಾಮ ಪುಟ್ಟೇಗೌಡರ ಮನೆ ಮೇಲ್ಛಾವಣಿ, ಗೋಡೆಗಳು ಹಾನಿಗೊಂಡು ದಿನನಿತ್ಯ ಬಳಕೆ ಪದಾರ್ಥಗಳು, ಬಟ್ಟೆ ಸೇರಿ ಇತರೆ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದನ್ನು ವೀಕ್ಷಿಸಿ ಘಟನೆ ಸಂಬಂಧ ಮನೆಯವರಿಂದ ಮಾಹಿತಿ ಪಡೆದು ಧೈರ್ಯ ಹೇಳಿ ನಿಮ್ಮ ಕುಟುಂಬದ ಜೊತೆ ಇರುವುದಾಗಿ ಹೇಳಿದರು.

ಘಟನೆ ಬಳಿಕ ತಾಲೂಕು ಆಡಳಿತ ಸ್ಥಳಕ್ಕೆ ಆಗಮಿಸಿ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆಯೇ, ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಭರವಸೆ ನೀಡಿದ್ದಾರೆಯೇ? ಎಂಬುದನ್ನು ಸಂತ್ರಸ್ತ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡರು.

ಈ ವೇಳೆ ಘಟನೆ ಮಾಹಿತಿ ಪಡೆದ 25 ರಿಂದ 30 ನಿಮಿಷಗಳ ನಂತರ ಶ್ರೀರಂಗಪಟ್ಟಣದಿಂದ ಅಗ್ನಿಶಾಮಕ ದಳ ವಾಹನ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದೆ. ಅಷ್ಟರಲ್ಲಾಗಲೇ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಹೋಬಳಿ ಕೇಂದ್ರಗಳಲ್ಲಿ ಕನಿಷ್ಠ ಒಂದು ಅಗ್ನಿಶಾಮಕ ವಾಹನ ಇದ್ದಿದ್ದರೆ ಇಂತಹ ಘಟನೆಯಿಂದ ಹೆಚ್ಚಿನ ಅವಘಡ ತಪ್ಪಿಸಬಹುದು ಎಂದು ಗ್ರಾಮಸ್ಥರು ತಮ್ಮ ಸಮಸ್ಯೆ ತೋಡಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಬೂಜಿ ಜಯಂತಿ ಆಚರಣೆಯಲ್ಲಿ ಲೋಪ: 15ರಂದು ದಸಂಸ ಪ್ರತಿಭಟನೆ
ಬಸ್‌ ಡಿಕ್ಕಿ ನವವಿವಾಹಿತ ಬೈಕ್‌ ಸವಾರ ಸಾವು