ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಐಕ್ಯ ಸ್ಥಳದಲ್ಲಿ ಶುಕ್ರವಾರ ನಡೆದ ನಂದಗಡ ಉತ್ಸವ 2024ರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಸಂಗೊಳ್ಳಿಯಲ್ಲಿ ಜನ್ಮ ಪಡೆದರು ತಮ್ಮ ಆಶಯದಂತೆ ಅವರು ಐಕ್ಯರಾಗಿದ್ದು, ನಂದಗಡದಲ್ಲಿ. ರಾಯಣ್ಣ ಕೇವಲ 33 ವರ್ಷ ಬದುಕಿದರು. ಇಡೀ ಜಗತ್ತು ಅವರ ಹೆಸರು ಗುರುತಿಸುವಷ್ಟು ದೊಡ್ಡ ಹೆಸರು ಸಂಪಾದನೆ ಮಾಡಿದ್ದಾರೆ. ರಾಯಣ್ಣನ ದೇಶ ಪ್ರೇಮ, ನಿಸ್ವಾರ್ಥ ಸೇವೆ ಇಂದಿನ ಯುವ ಪೀಳಿಗೆಗೆ ಸ್ಫೂರ್ತಿ ಎಂದರು.
ಸಂಗೊಳ್ಳಿ ರಾಯಣ್ಣನಂತಹ ಮಕ್ಕಳು ಪ್ರತಿ ಮನೆ ಮನೆಯಲ್ಲಿ ಜನಿಸಲಿ ಎಂಬುವುದು ಪ್ರತಿಯೊಬ್ಬರ ಆಸೆ. ಅವರ ಜನ್ಮದಿನ ಆಗಸ್ಟ್ 15 ದೇಶಕ್ಕೆ ಸ್ವಾತಂತ್ರ್ಯ ದೊರೆತ ದಿನವಾದರೆ, ಹುತಾತ್ಮರಾದ ದಿನ ಜನವರಿ 26 ಭಾರತ ಗಣರಾಜ್ಯೋತ್ಸವ ದಿನವಾಗಿರುವುದು ವಿಶೇಷ. ಸಂಗೊಳ್ಳಿ ಉತ್ಸವದಂತೆ ನಂದಗಡದಲ್ಲಿ ಕೂಡ ದೊಡ್ಡ ಮಟ್ಟದಲ್ಲಿ ಉತ್ಸವ ಮಾಡಬೇಕು ಎಂದು ಅಭಿಮಾನಿಗಳ ಬೇಡಿಕೆಯಾಗಿತ್ತು. ಅದರಂತೆ ಸರ್ಕಾರ ಸಹ ಇದಕ್ಕೆ ಅನುಮತಿ ನೀಡಿ ಈ ವರ್ಷ ಜಿಲ್ಲಾಡಳಿತದಿಂದ ನಂದಗಡ ಉತ್ಸವ ಆಚರಣೆ ಮಾಡಲಾಗುತ್ತಿದೆ. ಬರುವ ವರ್ಷದಲ್ಲಿ ಇನ್ನೂ ದೊಡ್ಡ ಮಟ್ಟದಲ್ಲಿ ನಂದಗಡ ಉತ್ಸವ ನಡೆಯಲಿ ಎಂಬುದು ನನ್ನ ಆಶಯವಾಗಿದೆ ಎಂದು ತಿಳಿಸಿದರು.ಬೆಳಗಾವಿ ಉಪವಿಭಾಗಾಧಿಕಾರಿ ಶವ್ರಣ ನಾಯಕ, ಖಾನಾಪುರ ತಹಸೀಲ್ದಾರ್ ಪ್ರಕಾಶ ಗಾಯಕವಾಡ, ನಂದಗಡ ಗ್ರಾಮ ಪಂಚಾಯತಿ ಅಧ್ಯಕ್ಷ ಯಲ್ಲಪ್ಪ ಶಿವಾಜಿಗರವ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ವೀರ ಜ್ಯೋತಿಗೆ ಯಾತ್ರೆಗೆ ಚಾಲನೆ