ಹುಬ್ಬಳ್ಳಿ:
ಅವರು ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಗುರುವಾರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಂಗೊಳ್ಳಿ ರಾಯಣ್ಣ ಜಯಂತಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ಹಾಗೂ ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಇಲ್ಲಿನ ವಿಮಾನ ನಿಲ್ದಾಣಕ್ಕೆ ರಾಯಣ್ಣನ ಹೆಸರಿಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ರಾಜ್ಯ ಸರ್ಕಾರ ಇದಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರದಲ್ಲಿ ಯಾವ ಇಲಾಖೆಗೆ ಮನವಿ ಸಲ್ಲಿಸಿದೆ, ಯಾವ ಹಂತದಲ್ಲಿದೆ ಎಂಬುದರ ಕುರಿತು ಶಾಸಕರು ನನಗೆ ಮಾಹಿತಿ ನೀಡಿದರೆ, ಮುಂದಿನ ಕ್ರಮಕೈಗೊಳ್ಳುವೆ ಎಂದರು.ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಕೆಲವರು ರಾಯಣ್ಣನ ಇತಿಹಾಸ ತಿರುಚಲು ಮುಂದಾಗಿದ್ದಾರೆ. ಒಡೆದಾಳುವ ನೀತಿ ಹಾಗೂ ಬ್ರಿಟಿಷ್ ಮನಸ್ಥಿತಿ ಉಳ್ಳವರು ಈಗಲೂ ಇದ್ದಾರೆ. ಅಂತಹವರನ್ನು ದೂರವಿಡಬೇಕು ಎಂದರು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು. ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ, ಮನಸೂರು ಮಠದ ಬಸವರಾಜ ದೇವರು, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ವಿಜಯಕುಮಾರ ಅಪ್ಪಾಜಿ, ಮಲ್ಲಿಕಾರ್ಜುನ ತಾಲೂರ, ಅಲ್ತಾಫ್ ಹಳ್ಳೂರ, ಶಿವಾನಂದ ಕರಿಗಾರ ಸೇರಿದಂತೆ ಹಲವರಿದ್ದರು.