ಕನ್ನಡಪ್ರಭ ವಾರ್ತೆ ಹಲಗೂರು
ಕರ್ನಾಟಕ ಪಬ್ಲಿಕ್ ಸ್ಕೂಲ್ ಅವರಣದಲ್ಲಿ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಸಾಂಸ್ಕೃತಿಕ ಸಂಘದಿಂದ ಸಂವಿಧಾನ ಓದು ಪುಸ್ತಕ ವಿತರಿಸಿ ಮಾತನಾಡಿದರು. ಇದೇ ವೇಳೆ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೂ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಬರೆದಿರುವ ಸಂವಿಧಾನ ಓದು ಪುಸ್ತಕವನ್ನು ವಿತರಣೆ ಮಾಡಲಾಯಿತು.
ಈ ವೇಳೆ ತಾಲೂಕು ಶಿಕ್ಷಕರ ಸಂಘದ ನಿರ್ದೇಶಕ ಪುಟ್ಟಸ್ವಾಮಿಗೌಡ, ಉಪ ಪ್ರಾಂಶುಪಾಲೆ ಅನುರಾಧ, ಶಿಕ್ಷಕರಾದ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸಿದ್ದಲಿಂಗಮೂರ್ತಿ, ಸಂಘದ ಪದಾಧಿಕಾರಿಗಳು ಸೇರಿದಂತೆ ಶಿಕ್ಷಕ ವರ್ಗ ಭಾಗವಹಿಸಿದ್ದರು.ಗಾಂಧೀಜಿ ಸ್ಮಾರಕಕ್ಕೆ ಪ್ರಜ್ಞಾವಂತರ ವೇದಿಕೆ ವತಿಯಿಂದ ಪುಷ್ಪಾರ್ಚನೆ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 77 ಹುತಾತ್ಮ ದಿನದ ಅಂಗವಾಗಿ ಪಶ್ಚಿಮ ವಾಹಿನಿಯ ಅವರ ಸ್ಮಾರಕಕ್ಕೆ ಪ್ರಜ್ಞಾವಂತರ ವೇದಿಕೆ ವತಿಯಿಂದ ಪುಷ್ಪಾರ್ಚನೆ ನೇರವೇರಿಸಿದರು.
ನಂತರ ವೆಂಕಟೇಶ್ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಎಲ್ಲಾ ಧರ್ಮಗಳನ್ನು ಪ್ರೀತಿಸುತ್ತಿದ್ದರು. ಯಾವುದೇ ಜಾತಿ ಧರ್ಮದ ಹೆಸರಿನಲ್ಲಿ ಕೂಗದೆ ಮೇಲು ಕೀಳು ಎಂಬ ಭಾವನೆ ಮಾಡದೆ ಆಧುನಿಕ ಭಾರತದಲ್ಲಿ ಗಾಂಧೀಜಿಯವರ ಮೌಲ್ಯಗಳನ್ನು ಕಾಪಾಡಬೇಕಿದೆ. ಅವರು ಬಿಟ್ಟು ಹೋಗಿರುವ ಸಿದ್ದಾಂತಗಳನ್ನು ನಾವುಗಳು ಹೆಚ್ಚು ಗೌರವಿಸಬೇಕು ಎಂದರು.