ಪುಸ್ತಕದ ಓದು ವಿಸ್ತೃತ ಜ್ಞಾನಾರ್ಜನೆಗೆ ಪೂರಕ

KannadaprabhaNewsNetwork |  
Published : Mar 09, 2026, 01:15 AM IST
ದೊಡ್ಡಬಳ್ಳಾಪುರದಲ್ಲಿ ನಡೆದ ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ವಿಜ್ಞಾನಿ ಸಿ.ವಿ.ರಾಮನ್ ಅವರು ಕೇವಲ ಮಹಾನ್ ವಿಜ್ಞಾನಿಯಷ್ಟೇ ಅಲ್ಲ, ಅತ್ಯುನ್ನತ ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಹೊಂದಿದ್ದ ವ್ಯಕ್ತಿಯಾಗಿದ್ದರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು

ದೊಡ್ಡಬಳ್ಳಾಪುರ: ವಿಜ್ಞಾನಿ ಸಿ.ವಿ.ರಾಮನ್ ಅವರು ಕೇವಲ ಮಹಾನ್ ವಿಜ್ಞಾನಿಯಷ್ಟೇ ಅಲ್ಲ, ಅತ್ಯುನ್ನತ ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಹೊಂದಿದ್ದ ವ್ಯಕ್ತಿಯಾಗಿದ್ದರು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು.

ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು ಮತ್ತು ವಿಕಾಸ ಪ್ರಶಿಕ್ಷಣ ಕೇಂದ್ರದ ವತಿಯಿಂದ ನಡೆದ ಪುಸ್ತಕ ಓದಿ ಬಹುಮಾನ ಗೆಲ್ಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ದೈನಂದಿನ ಜೀವನದಲ್ಲಿ ವಿಜ್ಞಾನದ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸಬೇಕಾಗಿದೆ. ವಿದ್ಯಾರ್ಥಿಗಳಲ್ಲಿ ಮತ್ತು ಯುವಜನತೆಯಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಕುತೂಹಲವನ್ನು ಬೆಳೆಸಬೇಕು. ದೇಶದ ವೈಜ್ಞಾನಿಕ ಪ್ರಗತಿ ಮತ್ತು ವಿಜ್ಞಾನಿಗಳ ಸಾಧನೆಯನ್ನು ಗೌರವಿಸಬೇಕು ಎಂದರು.

ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್ ಮಾತನಾಡಿ, ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪುಸ್ತಕ ಪ್ರೀತಿ ಬೆಳೆಸಲು ಸಹಕಾರಿ ಆಗಿದೆ. ಪುಸ್ತಕಗಳು ಜೀವನವನ್ನು ಪ್ರೇರೇಪಿಸುವ, ಶಿಕ್ಷಣ ನೀಡುವ ಮತ್ತು ಪರಿವರ್ತಿಸುವ ಶಕ್ತಿಯನ್ನು ಹೊಂದಿವೆ. ಶಾಲಾ ಕಾಲೇಜುಗಳಲ್ಲಿ ನಡೆಯುವ ಸಾಹಿತ್ಯ, ವಿಜ್ಞಾನ ಮತ್ತು ಸಂಸ್ಕೃತಿ ಸಮಾಗಮ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಕಾರಿ ಆಗಿದೆ ಎಂದರು.

ಶಿಕ್ಷಕ‌ ರಮೇಶ್ ಪೂಜಾರಿ ಮಾತನಾಡಿ, ಓದುಗರಲ್ಲಿ ಜ್ಞಾನ, ಕಲ್ಪನಾಶಕ್ತಿ ಮತ್ತು ಜೀವನದ ದೃಷ್ಟಿಕೋನವನ್ನು ವಿಸ್ತರಿಸುವ ಅದ್ಭುತ ಹವ್ಯಾಸ ಪುಸ್ತಕ ಓದು ಆಗಿದೆ. ಇದು ಮನಸ್ಸಿಗೆ ಸಂತೋಷ, ನೆಮ್ಮದಿ ಮತ್ತು ಹೊಸ ಲೋಕಗಳ ಪರಿಚಯವನ್ನು ನೀಡುತ್ತದೆ ಎಂದರು.

ವಿಕಾಸ ಪ್ರಶಿಕ್ಷಣ ಕೇಂದ್ರದ ಡಾ.ಎ.ಓ.ಆವಲಮೂರ್ತಿ, ಕಾರ್ಯಕ್ರಮದ ಸಂಚಾಲಕ‌ ವೆಂಕಟರಾಜು, ಕಜಾಪ ಕಾರ್ಯದರ್ಶಿ ಡಿ.ಪಿ.ಆಂಜನೇಯ, ತಾ.ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಪದಾಧಿಕಾರಿಗಳಾದ ಜಿ.ಸುರೇಶ್, ಕೋದಂಡರಾಮ್, ಎಚ್.ಎನ್.ಪ್ರಕಾಶ್, ಸಿ.ಅಣ್ಣಯ್ಯ, ರಂಗಸ್ವಾಮಯ್ಯ, ಜಿ.ಸಿ.ಶಿವಕುಮಾರ್, ಸೂರ್ಯನಾರಾಯಣ್, ಗಿರೀಶ್, ಲಕ್ಷ್ಮಿಕಾಂತಮ್ಮ, ಪ್ರಸನ್ನ, ಹಾಡೋನಹಳ್ಳಿ‌ ಗೋವಿಂದರಾಜು ಭಾಗವಹಿಸಿದ್ದರು.

8ಕೆಡಿಬಿಪಿ1-

ದೊಡ್ಡಬಳ್ಳಾಪುರದಲ್ಲಿ ನಡೆದ ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಟಿಪ್ಪರ್‌
ಗಡಿನಾಡು ಬೆಳಗಾವಿ ಕನ್ನಡಿಗರ ದೊಡ್ಡ ಅಸ್ಮಿತೆ