ಕನ್ನಡಪ್ರಭ ವಾರ್ತೆ, ತರೀಕೆರೆ
ಅವರು ಶುಕ್ರವಾರ ಸಮೀಪದ ನೇರಲಕೆರೆ ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ ಕನ್ನಡಪ್ರಭ ಪತ್ರಿಕೆ ಯುವ ಅವೃತ್ತಿ ಬಿಡುಗಡೆ ಸಮಾರಂಭದಲ್ಲಿ ಪತ್ರಿಕೆ ಬಿಡುಗಡೆ ನೆರವೇರಿಸಿ ಮಾತನಾಡುತ್ತಿದ್ದರು.
ಪತ್ರಿಕೆಯಲ್ಲಿನ ಬೇರೆ ಬೇರೆ ವಿಚಾರಗಳನ್ನು ಚೆನ್ನಾಗಿ ತಿಳಿದುಕೊಳ್ಳಬೇಕು, ಪಠ್ಯೇತರ ವಿಚಾರಗಳಲ್ಲೂ ಕೌಶಲ್ಯ ಪಡೆದುಕೊಳ್ಳಬೇಕು, ವಿದ್ಯಾರ್ಥಿನಿಯರು ಧೈರ್ಯವಂತರಾಗಬೇಕು, ಏಕೆಂದರೆ ಪ್ರತಿಯೊಂದು ಕ್ಷೇತ್ರದಲ್ಲೂ ಹೆಣ್ಣು ಮಕ್ಕಳು ಮುಂದೆ ಬರುತ್ತಿದ್ದಾರೆ, ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಲು ಸಿದ್ಧರಾಗಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು, ಸಾಮಾಜಿಕ ಕಳಕಳಿಯನ್ನು ಹೊಂದಿದ್ದು, ಸಮಾಜಕ್ಕೆ ಒಳಿತಾಗುವ ಕಾರ್ಯಗಳನ್ನು ಮಾಡಬೇಕು ಎಂದು ಅವರು ಹೇಳಿದರು.ಇದು ಬಹಳ ಒಳ್ಳೆಯ ಕಾರ್ಯಕ್ರಮವಾಗಿದೆ, ಶಾಲೆಯು ಒಳ್ಳೆಯ ಪರಿಸರವನ್ನು ಹೊಂದಿದೆ, ನಾವು ಮಾಡುವ ಉತ್ತಮ ಕೆಲಸಗಳಿಗೆ ಧರ್ಮ ಎನ್ನುವರು, ನಿಮ್ಮ ಪರಿಶ್ರಮ ಪ್ರಾಮಾಣಿಕವಾಗಿದ್ದರೆ ಕಾಲವೇ ನಿಮ್ಮ ಕನಸಿಗೆ ಜೀವ ತುಂಬುವುದು ನಿಶ್ಚಿತ, ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿರುವ ಸಮಸ್ಯೆಗಳನ್ನು ಪರಿಹರಿಸಲು ಖಂಡಿತ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಮುಖ್ಯೋಪಾಧ್ಯಾಯ ಹಾಲೇಶ್ ಕೆ.ಟಿ. ಮಾತನಾಡಿ ಕನ್ನಡಪ್ರಭ ಯುವ ಅವೃತ್ತಿ ಪತ್ರಿಕೆಯು ಪ್ರೌಢಶಾಲೆಯ ಮೂರು ತರಗತಿ ವಿದ್ಯಾರ್ಥಿಗಳಿಗೂ ಹೆಚ್ಚು ಅನುಕೂಲವಾಗುತ್ತದೆ, ಪತ್ರಿಕೆಯು ನಾಲ್ಕೂ ದಿಕ್ಕಿನ ಅನೇಕ ವಿಚಾರಗಳನ್ನು ಸಮಾಜಕ್ಕೆ ಮತ್ತು ಸಮುದಾಯಕ್ಕೆ ತಿಳಿಸುತ್ತದೆ, ಸಾಂಸ್ಕೃತಿಕವಾಗಿ ಜ್ಞಾನದಾಹವನ್ನು ಹೆಚ್ಚಿಸುತ್ತದೆ, ಪತ್ರಿಕೆಯಲ್ಲಿ ಸಿಲಬಸ್ ಕೂಡ ಇರುತ್ತದೆ, ಚೆನ್ನಾಗಿ ಮನನ ಮಾಡಿಕೊಳ್ಳಿ, ಇದರಿಂದ ವಾರ್ಷಿಕ ಪರೀಕ್ಷೆಗೆ ಹೆಚ್ಚು ಅನುಕೂಲವಾಗುತ್ತದೆ, ವಿದ್ಯಾರ್ಥಿಗಳು ನಾಯಕತ್ವ ಬೆಳೆಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿನಿಯರು ತಮ್ಮ ಅನಿಸಿಕೆಗಳನ್ನು ಕುರಿತು ಮಾತನಾಡಿದರು. ಶಿಕ್ಷಕರಾದ ರಮಾಕಾಂತ್, ಪಂಚಾಕ್ಷರಪ್ಪ,ವೀಣಾ, ಸತೀಶ್ ನಂದಿಹಳ್ಳಿ, ಮಂಜುಳ ಮಲ್ಲಿಗವಾಡ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಫೋಟೋ ಇದೆಃ
ತರೀಕೆರೆ ಸಮೀಪದ ಶ್ರೀ ಅಮೃತೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕನ್ನಡಪ್ರಭ ಯುವ ಆವೃತ್ತಿ ಪತ್ರಿಕೆ ಬಿಡುಗಡೆಯನ್ನು ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪುತ್ರಿ ಕೆ.ಡಿ.ಪಿ.ಸದಸ್ಯೆ ರಚನಾ ಶ್ರೀನಿವಾಸ್ ಅವರು ನೆರವೇರಿಸಿದರು. ಶಾಲಾ ಸಲಹಾ ಸಮಿತಿ ಉಪಾಧ್ಯಕ್ಷ ಷಡಕ್ಷರಪ್ಪ, ಶಾಲೆ ಮುಖ್ಯ ಶಿಕ್ಷಕ ಹಾಲೇಶ್ ಕೆ.ಟಿ. ಮತ್ತಿತರರು ಇದ್ದಾರೆ.