ಕೇಂದ್ರ ನೀತಿ ವಿರುದ್ಧ ಜನಂದೋಲನಕ್ಕೆ ಸಜ್ಜಾಗಿ: ಮಿಥುನ್ ರೈ

KannadaprabhaNewsNetwork |  
Published : Apr 21, 2026, 03:00 AM IST
ಸಭೆಯಲ್ಲಿ ಮಾತನಾಡುತ್ತಿರುವು ಮಿಥುನ್‌ ರೈ | Kannada Prabha

ಸಾರಾಂಶ

ಹಳೆಯಂಗಡಿ ಹರಿ ಓಂ ಸಭಾಭವನದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಪಾಲ್ಗೊಂಡು ಮಾತನಾಡಿದರು.

ಮೂಲ್ಕಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಇಂದು ಅಡುಗೆ ಅನಿಲದ ಕೃತಕ ಅಭಾವ ಎದುರಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಹೇಳಿದರು.ಹಳೆಯಂಗಡಿ ಹರಿ ಓಂ ಸಭಾಭವನದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ ಉದ್ದೇಶಿಸಿ ಮಾತನಾಡಿದರು.

ಗ್ಯಾಸ್‌ ಕೊರತೆಯಿಂದ ಸಿಎನ್‌ಜಿ ರಿಕ್ಷಾ ಡ್ರೈವರ್ ಗಳು ತೊಂದರೆ ಅನುಭವಿಸುತ್ತಿದ್ದಾರೆ. ಇದೆಲ್ಲಾ ತೊಂದರೆಗಳನ್ನು ಜನರಿಗೆ ತಿಳಿ ಹೇಳುವ ಕೆಲಸ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಾಗಿದೆ. ಕಾರ್ಯಕರ್ತರು ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಲು ಸಿದ್ಧರಾಗಿ ಎಂದರು.

ಕೆಪಿಸಿಸಿ ಸದಸ್ಯರಾದ ವಸಂತ ಬರ್ನಾಡ್ ಪಕ್ಷ ಸಂಘಟನೆ ಬಗ್ಗೆ ಸಲಹೆ ನೀಡಿದರು.

ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ನಾಯಕರಾದ ಗೋಪಿನಾಥ ಪಡಂಗ, ಮೋನಪ್ಪ ಶೆಟ್ಟಿ ಎಕ್ಕಾರು, ಹಸನಬ್ಬ ಬಾಳ, ಉಲ್ಲಾಸ್ ಶೆಟ್ಟಿ ಪೆರ್ಮುದೆ, ಸುಬ್ರಹ್ಮಣ್ಯ ಭಟ್ ಶಿಬರೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ವಿಲ್ಮಾ ಡಿಕೊಸ್ಥ, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ಪೂಜಾರಿ ಮುಲ್ಕಿ ಮೊದಲಾದವರು ಇದ್ದರು. ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಕೌನ್ಸಿಲರ್ ಪ್ರಕಾಶ್ ಆಚಾರ್ಯ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಶಾದೇವಿ ಗುಡಗುಂಟಿಗೆ ಗೌರವ ಡಾಕ್ಟರೇಟ್‌ ಪ್ರದಾನ ಇಂದು
ವಿಶ್ವ ಶಾಂತಿ, ಒಳಿತಿಗಾಗಿ ಪಂಚ ಕಲ್ಯಾಣ ಮಹೋತ್ಸವ