ಕನ್ನಡಪ್ರಭ ವಾರ್ತೆ ಉಡುಪಿ
ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳಿಗೆ ಪದೇಪದೆ ಅನಾಗರಿಕ ಶಬ್ದಗಳನ್ನು ಪ್ರಯೋಗಿಸಿ ನಿಂದಿಸುವ ಈಶ್ವರಪ್ಪ ಅವರು, ''''ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಅವರನ್ನು ಗುಂಡಿಕ್ಕಿ ಕೊಲ್ಲಬೇಕು'''' ಎನ್ನುವ ಮೂಲಕ ಭಯೋತ್ಪಾದನೆಗೆ ಪ್ರಚೋದನೆ ನೀಡಿದ್ದಾರೆ. ಅಲ್ಲದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಜ್ಯದ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ತಂದೆಯ ಹೊಟ್ಟೆಯಲ್ಲಿ ಹುಟ್ಟಿದ ಕೆಟ್ಟ ಹುಳ ಎಂದು ಕರೆದಿದ್ದಾರೆ. ಅವರ ಈ ಹೇಳಿಕೆಗಳು ಈಶ್ವರಪ್ಪ ಅವರ ಮಾನಸಿಕ ಸ್ಥಿತಿಯನ್ನು ಹೇಳುತ್ತದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಬಿಜೆಪಿಯವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದೇ ಅವರನ್ನು ಕಡೆಗಣಿಸಿರುವುದೇ ಈಶ್ವರಪ್ಪ ಅವರ ಈ ಮಾನಸಿಕ ತೊಳಲಾಟಕ್ಕೆ ಕಾರಣ. ಆದ್ದರಿಂದ ಅವರಿಗೆ ತಕ್ಷಣ ಚಿಕಿತ್ಸೆ ಕೊಡಿಸಿ ಎಂದು ಉಡುಪಿ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.