ಹೈ ಕಮಾಂಡ್‌ ಒಪ್ಪಿದರೆ ಸ್ಪರ್ಧಿಸಲು ಸಿದ್ಧ: ತಾರಾದೇವಿ

KannadaprabhaNewsNetwork |  
Published : Feb 26, 2024, 01:35 AM IST
 ಮಾಜಿ ಕೇಂದ್ರ ಸಚಿವೆ ಡಿ.ಕೆ. ತಾರಾದೇವಿ  | Kannada Prabha

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಕಾಂಗ್ರೇಸ್ ಹೈಕಮಾಂಡ್ ಒಪ್ಪಿದರೆ ಸ್ಪರ್ಧಿಸಲು ಸಿದ್ದಳಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಹೇಳಿದರು.

ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಕಾಂಗ್ರೇಸ್ ಹೈಕಮಾಂಡ್ ಒಪ್ಪಿದರೆ ಸ್ಪರ್ಧಿಸಲು ಸಿದ್ದಳಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಹೇಳಿದರು. ಇತ್ತೀಚೆಗೆ ಕೆಲವರು ತಾರಾದೇವಿಯವರಿಗೆ ವಯಸ್ಸಾಗಿದೆ, ಅನಾರೋಗ್ಯಪೀಡಿತರಾಗಿದ್ದಾರೆಂಬ ಸುಳ್ಳು ಸುದ್ದಿ ಹರಡುತ್ತಿ ರುವುದು ಸತ್ಯಕ್ಕೆ ದೂರವಾದ ಸಂಗತಿ. ನಾನು ಆರೋಗ್ಯಪೂರ್ಣವಾಗಿ, ಚೈತನ್ಯಭರಿತಳಾಗಿದ್ದೇನೆ. ಅವಕಾಶ ನೀಡಿದರೆ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದರೆ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಬಹುದಾಗಿದೆ ಎಂದರು. ಈಗಾಗಲೇ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ ಸಂದರ್ಭದಲ್ಲಿ ಉತ್ತಮ ಸ್ಪಂದನೆ ದೊರಕಿದೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಮಾಜಸೇವಾ ಸಂಸ್ಥೆಯನ್ನು ಹುಟ್ಟುಹಾಕಿ ಆ ಮೂಲಕ ಮಹಿಳೆಯರು, ಯುವಜನರ ಸಬಲೀಕರಣ, ಪರಿಸರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಲು ಚಿಂತನೆ ಇದೆ ಎಂದು ಹೇಳಿದರು. ಪೋಟೋ ಫೈಲ್ ನೇಮ್ 25 ಕೆಸಿಕೆಎಂ 2

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ