ಕನ್ನಡಪ್ರಭ ವಾರ್ತೆ ಬಾಗಲಕೋಟೆಹಿಂದಿನ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮುದಾಯದ ನಾಯಕಿಯರಿಗೆ ಟಿಕೆಟ್ ನೀಡುವುದರ ಮೂಲಕ ಈ ಸಮುದಾಯಕ್ಕೆ ಆದ್ಯತೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನಾಗಿ ಘೋಷಿಸಿದಲ್ಲದೆ, ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಲು ಕ್ರಮ ಕೈಗೊಂಡಿದ್ದೇನೆ. ರಾಣಿ ಚನ್ನಮ್ಮ ಜಯಂತಿ ಆಚರಣೆಗೆ ಆದೇಶಿಸಿದ್ದು ಸಹ ನಾನೇ. ಬಿಜೆಪಿ ಅವರಿಂದ ಇದು ಯಾಕೆ ಸಾಧ್ಯವಾಗಲಿಲ್ಲ ಎಂಬುದನ್ನು ಸಮಾಜ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಸಮುದಾಯದ ಎಲ್ಲ ವಿಷಯಗಳಿಗೆ ಸ್ಪಂದಿಸಲು ನಾವು ಸಿದ್ಧರಿದ್ದೇವೆ. ಉಪಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಬೇಕು, ಉಮೇಶ ಮೇಟಿ ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಸಮಾಜದ ಬಂಧುಗಳು ಪಕ್ಷಕ್ಕೆ ನಿರಂತರ ಬೆಂಬಲ ನೀಡುತ್ತಿದ್ದು, ಪ್ರಸಕ್ತ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು. ದಿ.ಎಚ್.ವೈ.ಮೇಟಿ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಅಭಿವೃದ್ಧಿ ಬಗ್ಗೆ ಅವರು ಇನ್ನೂ ಸಾಕಷ್ಟು ಕನಸು ಕಂಡಿದ್ದರು. ಆ ಕನಸುಗಳು ಸಾಕಾರಗೊಳ್ಳಲು ಮತ್ತೊಮ್ಮೆ ಕಾಂಗ್ರೆಸ್ ಗೆ ಮತ ನೀಡಬೇಕು. ನಿಮ್ಮ ಸಮಾಜದ ಎಲ್ಲಾ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.