ನೈಜ ಕಲಾವಿದರು ಎಂದೆಂದೂ ಅಜರಾಮರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸತೀಶ್

KannadaprabhaNewsNetwork |  
Published : Jan 02, 2026, 02:15 AM IST
1ಕೆಆರ್ ಎಂಎನ್ 6.ಜೆಪಿಜಿರಾಮನಗರದ ಕಂದಾಯ ಭವನದ ಮೂರನೇ ಮಹಡಿಯ ಕೊಠಡಿಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಿಸಲಾಯಿತು. | Kannada Prabha

ಸಾರಾಂಶ

ವಿಶ್ವದಲ್ಲಿಯೇ ಅತ್ಯುತ್ತಮ ವಾಸ್ತು ಶಿಲ್ಪ ಕಲೆಯನ್ನು ಮುಂಚೂಣಿಗೆ ತಂದಿದ್ದೇ ಅಮರ ಶಿಲ್ಪಿ ಜಕಣಾಚಾರಿಯವರು, ಅವರು ನಮ್ಮ ಸಮುದಾಯದವರಾಗಿರುವುದು ನಮಗೆ ಹೆಮ್ಮೆಯ ವಿಷಯ. ಅವರು ಹಾಕಿಕೊಟ್ಟಂತಹ ದಾರಿಯಲ್ಲಿಯೇ ನಮ್ಮ ಮೂಲ ಕಸುಬನ್ನು ಇಂದಿನ ಆಧುನಿಕ ಜಗತ್ತಿಗೆ ನಾವು ಮುಂದುವರಿಸಿಕೊಂಡು ಹೋಗುವುದು ಅವಶ್ಯಕವಾಗಿದೆ.

ರಾಮನಗರ: ಅಮರ ಶಿಲ್ಪಿ ಜಕಣಾಚಾರಿಯವರು ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಸೇರಿ ಹಲವೆಡೆ ಶಿಲ್ಪ ಕಲೆಗಳ ಕೊಡುಗೆ ನೀಡಿದ್ದು, ಎಲ್ಲಿಯೂ ಸಹ ಅವರು ರಚಿಸಿರುವುದು ಎಂದು ಬರೆದುಕೊಂಡಿಲ್ಲ. ಆ ರೀತಿಯ ನೈಜ ಕಲಾವಿದರು ಇಂದಿಗೂ ಅಜರಾಮರರಾಗಿ ಉಳಿದಿರುತ್ತಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಹೇಳಿದರು.

ನಗರದ ಕಂದಾಯ ಭವನದ ಮೂರನೇ ಮಹಡಿಯ ಕೊಠಡಿ ಸಂಖ್ಯೆ: 409ರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿಶ್ವಕರ್ಮ ಅಭಿವೃದ್ಧಿಯ ಮುಖಾಂತರ ಸವಲತ್ತುಗಳನ್ನು ಬಳಸಿಕೊಂಡು ಎಲ್ಲರೂ ಸ್ವಾವಲಂಬಿಯಾಗಿ ಬದುಕಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಹಾಗೂ ತಮ್ಮ ತಮ್ಮ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿ ತಮ್ಮ ಮೂಲ ಕಸುಬಿನ ಜೊತೆಗೆ ಅವರು ಸಮಾಜಕ್ಕೆ ಕೊಡುಗೆಯಾಗುವ ರೀತಿಯಲ್ಲಿ ಬೆಳಸಬೇಕು ಎಂದರು.

ಸಮುದಾಯದ ಮುಖಂಡರಾದ ಶ್ರೀಧರ್ ಆಚಾರ್ ಮಾತನಾಡಿ, ವಿಶ್ವದಲ್ಲಿಯೇ ಅತ್ಯುತ್ತಮ ವಾಸ್ತು ಶಿಲ್ಪ ಕಲೆಯನ್ನು ಮುಂಚೂಣಿಗೆ ತಂದಿದ್ದೇ ಅಮರ ಶಿಲ್ಪಿ ಜಕಣಾಚಾರಿಯವರು, ಅವರು ನಮ್ಮ ಸಮುದಾಯದವರಾಗಿರುವುದು ನಮಗೆ ಹೆಮ್ಮೆಯ ವಿಷಯ. ಅವರು ಹಾಕಿಕೊಟ್ಟಂತಹ ದಾರಿಯಲ್ಲಿಯೇ ನಮ್ಮ ಮೂಲ ಕಸುಬನ್ನು ಇಂದಿನ ಆಧುನಿಕ ಜಗತ್ತಿಗೆ ನಾವು ಮುಂದುವರಿಸಿಕೊಂಡು ಹೋಗುವುದು ಅವಶ್ಯಕವಾಗಿದೆ ಎಂದರು.

ಜಿಪಂ ಸಹಾಯಕ ಕಾರ್ಯದರ್ಶಿಗಳಾದ ಶಿವಕುಮಾರ್, ಸಮುದಾಯದ ಮುಖಂಡ, ರಾಜ್ಯ ಗೌರವಾಧ್ಯಕ್ಷರಾದ ಬಿ. ಉಮೇಶ್, ತಾಲೂಕು ಅಧ್ಯಕ್ಷ ಪಿ. ಲಿಂಗಾಚಾರ್, ಕಾರ್ಯದರ್ಶಿ ಶ್ರೀನಿವಾಸ್, ಪ್ರಭು, ಜಗನ್ನಾಥ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಕಸರತ್ತು ಸಿದ್ದರಾಮಯ್ಯ ಬಜೆಟ್‌ ತಯಾರಿ
ಬಳ್ಳಾರಿ - ಗುಂಡೇಟಿಗೆ ಯುವಕ ಬಲಿ - ನಗರದಲ್ಲಿ 144 ಸೆಕ್ಷನ್ ಜಾರಿ