ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಶನಿವಾರ ಇಲ್ಲಿನ ಗೋಕುಲ ರಸ್ತೆಯಲ್ಲಿರುವ ಗೋಕುಲ್ ಗಾರ್ಡನ್ನಲ್ಲಿ ಮಹಾರಾಣಿ ಅಹಲ್ಯಾಬಾಯಿ ಹೊಳ್ಕರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಕುರುಬ ಸಮಾಜದ ಸಮಾವೇಶವನ್ನು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು, ದೇಶಕ್ಕಾಗಿ ಹೋರಾಡಿದ ಮಹನಿಯರ ನೈಜ ಇತಿಹಾಸವನ್ನು ದೇಶದ ಜನತೆಗೆ ತಿಳಿಸುವ ಕಾರ್ಯವಾಗಬೇಕಿದೆ ಎಂದರು.
ನರೇಂದ್ರ ಮೋದಿ ಅವರು ಸ್ವತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಇಂದು ಅವರೇ ಪ್ರಧಾನಿಯಾಗುವ ಮೂಲಕ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಎಂದಿಗೂ ಹಿಂದುಳಿದವರ ಏಳ್ಗೆಗೆ ಶ್ರಮಿಸಿಲ್ಲ. ತಮ್ಮ ಅಧಿಕಾರದ ಅವಧಿಯಲ್ಲಿ ಹಿಂದುಳಿದ ವರ್ಗದವರನ್ನು ಪ್ರಧಾನಿಯನ್ನಾಗಿಸಲಿಲ್ಲ ಎಂದು ಟೀಕಿಸಿದರು.ಪರಿಶ್ರಮ ಜೀವಿಗಳು:
ಡಾ. ಬಿ.ಆರ್. ಅಂಬೇಡ್ಕರ್, ಬಸವಣ್ಣ, ಭಕ್ತ ಕನಕದಾಸರು, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಒಂದೇ ಜಾತಿ, ಸಮುದಾಯಕ್ಕೆ ಸೀಮಿತರಾದವರಲ್ಲ. ಚಂದ್ರಗುಪ್ತರು, ಮಹಾರಾಣಿ ಅಹಲ್ಯಾದೇವಿ, ಸಂಗೊಳ್ಳಿ ರಾಯಣ್ಣನವರು ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ವ್ಯಕ್ತಿಗಳು. ಇಂತಹ ಮಹನಿಯರ ಆದರ್ಶ ಜನರಿಗೆ ತಿಳಿಸುವ ಕಾರ್ಯವಾಗಬೇಕಿದೆ. ರಾಜ್ಯದಲ್ಲಿ 3ನೇ ಅತಿದೊಡ್ಡ ಸಮಾಜ ಹೊಂದಿದ ಕುರುಬರ ಏಳ್ಗೆಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿದರು.
ಶಾಸಕ ಎಂ.ಆರ್. ಪಾಟೀಲ, ಮಾ. ನಾಗರಾಜ, ಸೀಮಾ ಮಸೂತಿ ಡಾ. ಮಹೇಶ ನಾಲವಾಡ, ತಿಪ್ಪಣ್ಣ ಮಜ್ಜಗಿ, ರವಿ ದಂಡಿನ, ರಾಜೇಶ್ವರಿ ಸಾಲಗಟ್ಟಿ, ಬೀರಪ್ಪ ಖಂಡೇಕಾರ, ಬಸವರಾಜ ಕರಡಿಕೊಪ್ಪ, ಮೇನಕಾ ಹುರಳಿ, ಈರಣ್ಣ ಗುಳಗುಳಿ, ರಾಜಸ್ಥಾನದ ದೇವಾಸಿ ಸಮಾಜದ ಮುಖಂಡ ನಿಥಿನ್ ಸೇರಿದಂತೆ ಹಲವರಿದ್ದರು.