ಹೊಸಳ್ಳಿಯಲ್ಲಿ ನನ್ನ ಭವಿಷ್ಯ ನನ್ನ ಆಯ್ಕೆ ಕಾರ್ಯಕ್ರಮ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಯಲಬುರ್ಗಾ
ತಾಲೂಕಿನ ಹೊಸಳ್ಳಿ ಗ್ರಾಮದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನನ್ನ ಭವಿಷ್ಯ ನನ್ನ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಇರುವಾಗಲೇ ಶಿಕ್ಷಕರು ಅವರ ಆಸಕ್ತಿ, ಅಭಿರುಚಿ ಗುರುತಿಸಿ ಅದನ್ನು ಪೋಷಿಸಬೇಕು ಎಂದರು.
ವಸತಿ ಶಾಲೆ ಪ್ರಾಂಶುಪಾಲ ವಿ.ಬಿ. ಹನುಮಶೆಟ್ಟಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡು ಸತತ ಅಭ್ಯಾಸದ ಕಡೆ ಗಮನಹರಿಸುವ ಮೂಲಕ ಹೆಚ್ಚು ಅಂಕ ಪಡೆದು ಉತ್ತೀರ್ಣವಾಗಬೇಕು. ಕೇವಲ ಪಾಸಾದರೆ ಸಾಲದು ಮನದಲ್ಲಿಟ್ಟುಕೊಂಡು ಅಭ್ಯಾಸದಲ್ಲಿ ನಿರತರಾಗಬೇಕು ಎಂದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ೨೦೨೩-೨೪ನೇ ಸಾಲಿನ ಗಾಣಿಗ ಸಮಾಜದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.೯೦ ಅಂಕ ಪಡೆದ ಜಿಲ್ಲೆಯ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವುದರ ಜತೆಗೆ ಸಮಾಜದ ಗಣ್ಯರಿಗೆ ಸನ್ಮಾನ ಮಾಡಲಾಗುವುದು ಎಂದರು.ಅಂದು ಬೆಳಗ್ಗೆ ಕನಕದಾಸ ವೃತ್ತದಿಂದ ಅಂಬೇಡ್ಕರ್ ಭವನದವರೆಗೂ ಮಹಿಳೆಯದಿಂದ ಕುಂಭ ಕಳಸದೊಂದಿಗೆ ವನಶ್ರೀ ಮಠದ ಜಯದೇವ ಜಗದ್ಗುರು ಸ್ವಾಮೀಜಿಗಳ ಭಾವಚಿತ್ರ ಮೆರವಣಿಗೆ ನಡೆಯಲಿದೆ. ವಿಜಯಪುರದ ವನಶ್ರೀ ಮಠದ ಡಾ. ಜಯಬಸವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಯಡ್ಡೋಣಿ ಸಂಸ್ಥಾನ ಮಠದ ಕೇಶವಾನಂದ ಮಹಾಸ್ವಾಮಿ ಸಮ್ಮುಖ ವಹಿಸುವರು. ಶಾಸಕ ಬಸವರಾಜ ರಾಯರಡ್ಡಿ ಉದ್ಘಾಟಿಸಲಿದ್ದಾರೆ. ಅಥಣಿ ಶಾಸಕ ಲಕ್ಷ್ಮಣ ಸವದಿ ಘನ ನೇತೃತ್ವ ವಹಿಸುವರು. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಶಿವರಾಜ ತಂಗಡಗಿ, ರುದ್ರಮುನಿ ಗಾಳಿ, ಸಂಸದ ಪಿ.ಸಿ. ಗದ್ದಿಗೌಡ್ರ, ಮಾಜಿ ಸಚಿವ ಹಾಲಪ್ಪ ಆಚಾರ, ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.