ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ರೋಟರಿ ಸಭಾಂಗಣದಲ್ಲಿ ನಡೆದ ರೀಬಿಲ್ಡ್ ಕೊಡಗು ಸಂಸ್ಥೆ 6ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ರೀಬಿಲ್ಡ್ ಕೊಡಗು ಸಂಸ್ಥೆ ಜನರ ಸಮಸ್ಯೆಗಳನ್ನು ಅರಿತು ಅವರ ಅವಶ್ಯಕತೆಗಳಿಗೆ ಸ್ಪಂದಿಸಿರುವುದು ಶ್ಲಾಘನೀಯ. ಅನೇಕ ಸಂದರ್ಭಗಳಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ.ಎ.ಕುಶಾಲಪ್ಪ ಕೊಡಗಿನ ಜನತೆಗೆ ಏಕಾಂಗಿಯಾಗಿ ಪರಿಹಾರವನ್ನು ಒದಗಿಸಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದಾರೆ. ಇವರ ಸಮಾಜಮುಖಿ ಕಾರ್ಯ ಇತರರಿಗೆ ಮಾದರಿ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ರೀಬಿಲ್ಡ್ ಕೊಡಗು ಸಂಸ್ಥೆಯ ಸಂಸ್ಥಾಪಕ ಕೆ.ಎ.ಕುಶಾಲಪ್ಪ (ಕೇಳಪಂಡ), ವಿದ್ಯಾರ್ಥಿಗಳು ಜೀವನದಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ ತಾವು ಕಲಿತ ಶಾಲೆ, ಶಿಕ್ಷಕರು ಹಾಗೂ ಉತ್ತಮ ಕೆಲಸಕ್ಕೆ ಪ್ರೇರಿಪಿಸದವರನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಇದರಿಂದ ಸಂಬಂಧಗಳಿಗೆ, ಜ್ಞಾನಕ್ಕೆ ಬೆಲೆಯೇ ಇಲ್ಲದಂತಾಗಿದೆ. ಮೊದಲು ವಯಸ್ಸು, ಸಂಬಂಧ, ಜ್ಞಾನ ನಂತರ ಹಣಕ್ಕೆ ಬೆಲೆ ನೀಡಬೇಕು, ಆಗ ಬದುಕು ಸುಂದರವಾಗಿರುತ್ತದೆ ಎಂದರು.
ಬೆಂಗಳೂರಿನ ರೀಇನ್ವೆಂಟ್ ಅಪಾರಲ್ಸ್ ನ ನಿರ್ದೇಶಕ ಅಭಿತಾ ಜೈನ್ ಬಾಬೆಲ್, ರೋಟರಿ, ಇನ್ನರ್ ವಿಲ್ ಸಂಸ್ಥೆಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಇನ್ನರ್ ವೀಲ್ ಖಜಾಂಚಿ ದಿವ್ಯ ಮುತ್ತಣ್ಣ ಸ್ವಾಗತಿಸಿ, ನಿರೂಪಿಸಿದರು. ರೀಬಿಲ್ಡ್ ಕೊಡಗು ಸಂಸ್ಥೆಯ ಸಂಸ್ಥಾಪಕ ಕೆ.ಎ.ಕುಶಾಲಪ್ಪ ವಂದಿಸಿದರು.