ರಾಮನಗರ: ಯುದ್ದ ಬೇಡ, ಗ್ಯಾಸ್ ಬೇಕು ಎಂದು ಈಡುಗಾಯಿ ಒಡೆಯುವ ಮೂಲಕ ಕನ್ನಡ ಚಳವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗಾಲ್ಫ್ ರಾಷ್ಟ್ರಗಳ ಯುದ್ಧದಿಂದಾಗಿ ಬೇರೆ ರಾಷ್ಟ್ರಗಳ ಮೇಲೂ ಸಾಕಷ್ಟು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಸಮರ್ಪಕ ಗ್ಯಾಸ್ ಪೂರೈಕೆ ಆಗ್ತಿಲ್ಲ. ಪೆಟ್ರೋಲ್, ಡಿಸೇಲ್ ದರಗಳು ಹೆಚ್ಚಾಗಿದೆ. ಕರ್ನಾಟಕದಲ್ಲಿ ಆಟೋಗಳು ನಿಂತಿವೆ. ಹೋಟೆಲ್ಗಳು ಮುಚ್ಚಿವೆ. ಬೆಂಗಳೂರಿನಲ್ಲಿ ಕುಡಿಯುವ ನೀರಿಲ್ಲ. ಈ ಕೂಡಲೇ ಅಮೆರಿಕಾ, ಇಸ್ರೇಲ್, ಇರಾನ್ ದೇಶಗಳ ನಡುವಿನ ಯುದ್ದ 15 ದಿನಗಳೊಳಾಗಿ ಯುದ್ದ ನಿಲ್ಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಯುದ್ದ ಮಾಡುತ್ತಿರುವ ದೇಶಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿ ಯುದ್ದ ನಿಲ್ಲಿಸಲು ಪ್ರಯತ್ನಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷರಾದ ಎಂ.ಜಗದೀಶ್ಐಜೂರು, ರಾಜ್ಯ ಉಸ್ತುವಾರಿ ಅಧ್ಯಕ್ಷ ವಿ.ಎನ್. ಗಂಗಾಧರ್ , ಜಿಲ್ಲಾಧ್ಯಕ್ಷ ಸಿ.ಎಸ್ ಜಯಕುಮಾರ್, ದಲಿತ ಘಟಕದ ಜಿಲ್ಲಾಧ್ಯಕ್ಷ ಕೆ.ಜಯರಾಮು, ಮಹಿಳಾ ಘಟಕದ ತಾಲೂಕು ಕಾರ್ಯದರ್ಶಿ ಪುಷ್ಪಲತಾ, ತಾಲೂಕು ಉಪಾಧ್ಯಕ್ಷ ಸಿ.ಎಂ ವಿಜಯಕುಮಾರ್, ತಾಲೂಕು ಕಾರ್ಯಾಧ್ಯಕ್ಷ ಕರುನಾಡ ಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಕೆ.ಆರ್,ವಿ ಕುಮಾರ್. ವಾಟಾಳ್ ನಾಗರಾಜ್ ಆಪ್ತ ಕಾರ್ಯದರ್ಶಿ ಪಾರ್ಥಸಾರಥಿ ಮತ್ತಿತರರು ಭಾಗವಹಿಸಿದ್ದರು.31ಕೆಆರ್ ಎಂಎನ್ 2.ಜೆಪಿಜಿ