ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಸಿಎಸ್ಇ-ಎಐಎಂಎಲ್ ವಿಭಾಗದಿಂದ ಶನಿವಾರ ಕೃತಕ ಬುದ್ದಿಮತ್ತೆ ವಲಯದ ಸಮಕಾಲೀನ ಬೆಳವಣಿಗೆಗಳ ಕುರಿತ ಒಂದು ದಿನದ ಪ್ರಾಧ್ಯಾಪಕರ ಅಭಿವೃದ್ದಿ ಕಾರ್ಯಾಗಾರ ನಡೆಯಿತು.
ಶೈಕ್ಷಣಿಕ ವಲಯದಲ್ಲಿ ಕೃತಕ ಬುದ್ದಿಮತ್ತೆ ಹಲವು ಬದಲಾವಣೆಗಳಿಗೆ ದಿಕ್ಸೂಚಿಯಾಗಲಿದ್ದು, ಸಾಂಪ್ರದಾಯಿಕ ಮಾದರಿಗಳ ಮುಂದುವರಿಕೆಗೆ ದೊಡ್ಡ ಸವಾಲು ಎದುರಾಗಲಿದೆ. ಈ ಹಂತದಲ್ಲಿ ಗುಣಾತ್ಮಕ ಕೌಶಲ್ಯದಿಂದ ಮಾತ್ರ ಪರಿಣಾಮಕಾರಿ ಅಸ್ತಿತ್ವವನ್ನು ಪ್ರತಿಪಾದಿಸುವುದು ಸಾಧ್ಯ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ವಿಜಯಕಾರ್ತಿಕ್ ಅಧ್ಯಕ್ಷತೆ ವಹಿಸಿದ್ದರು. ಡೀನ್ ಡಾ.ಶ್ರೀನಿವಾಸರೆಡ್ಡಿ, ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್, ಎಐಎಂಎಲ್ ವಿಭಾಗ ಮುಖ್ಯಸ್ಥ ಡಾ.ಬಿ.ಎನ್.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.ಫೋಟೋ-
13ಕೆಡಿಬಿಪಿ4- ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಎಐಎಂಎಲ್ ವಿಭಾಗದಿಂದ ನಡೆದ ಪ್ರಾಧ್ಯಾಪಕರ ಅಭಿವೃದ್ದಿ ಕಾರ್ಯಾಗಾರಕ್ಕೆ ಡಾ.ಕಪಿಲ್ ತಿವಾರಿ ಚಾಲನೆ ನೀಡಿದರು.