ಮೊಬೈಲ್ ಆ್ಯಪ್ ಬಳಸಿ ಬೆಳೆ ಮಾಹಿತಿ ದಾಖಲಿಸಿ

KannadaprabhaNewsNetwork |  
Published : Apr 05, 2025, 12:45 AM IST
ಕ್ಯಾಪ್ಷನ3ಕೆಡಿವಿಜಿ41 ದಾವಣಗೆರೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಬೆಳೆ ಸಮೀಕ್ಷೆ ಕೈಪಿಡಿ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ಕೃಷಿ ಇಲಾಖೆ ವತಿಯಿಂದ 2025-26ನೇ ಬೇಸಿಗೆ ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ಸ್ವತಃ ದಾಖಲಿಸಲು ‘ಬೆಳೆ ಸಮೀಕ್ಷೆ’ಗೆ ಚಾಲನೆ ನೀಡಲಾಗಿದೆ. ಮೊಬೈಲ್ ಆ್ಯಪ್ ಮೂಲಕ ರೈತರು ಬೆಳೆ ದಾಖಲಿಸುವಂತೆ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

- ಬೆಳೆ ಸಮೀಕ್ಷೆ ಕೈಪಿಡಿ ಬಿಡುಗಡೆಗೊಳಿಸಿ ಮಾಯಕೊಂಡ ಶಾಸಕ ಬಸವಂತಪ್ಪ ಸಲಹೆ - - - ಕನ್ನಡಪ್ರಭ ವಾರ್ತೆ ದಾವಣಗೆರೆ

ಕೃಷಿ ಇಲಾಖೆ ವತಿಯಿಂದ 2025-26ನೇ ಬೇಸಿಗೆ ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ಸ್ವತಃ ದಾಖಲಿಸಲು ‘ಬೆಳೆ ಸಮೀಕ್ಷೆ’ಗೆ ಚಾಲನೆ ನೀಡಲಾಗಿದೆ. ಮೊಬೈಲ್ ಆ್ಯಪ್ ಮೂಲಕ ರೈತರು ಬೆಳೆ ದಾಖಲಿಸುವಂತೆ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಬೆಳೆ ಸಮೀಕ್ಷೆ ಕೈಪಿಡಿ’ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರಿಂದಲೇ ಬೆಳೆ ಸಮೀಕ್ಷೆ ಮಾಡುವ ರೈತಸ್ನೇಹಿ ಕಾರ್ಯಕ್ರಮ ಇದಾಗಿದೆ. ಈ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ, ಬೆಳೆ ಪರಿಹಾರ ಮತ್ತು ವಿವಿಧ ಇಲಾಖೆಗಳ ಸೌಲಭ್ಯ ಪಡೆಯಲು ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಸಲು ಅನುಕೂಲವಾಗಲಿದೆ. ಆದ್ದರಿಂದ ಸ್ವತಃ ರೈತರೇ ತಮ್ಮ ಮೊಬೈಲ್‌ನಲ್ಲಿ ಆಪ್ ಡೌನ್‌ಲೌಡ್ ಮಾಡಿಕೊಂಡು, ಸಕಾಲಿಕವಾಗಿ ಎಲ್ಲ ಬೆಳೆಗಳ ವಿವರಗಳನ್ನು ಅಪ್‌ಲೋಡ್ ಮಾಡಬೇಕು. ಇದರಿಂದ ನ್ಯೂನತೆಗಳನ್ನು ಕಡಿಮೆ ಮಾಡಬಹುದು. ಸೌಲಭ್ಯಗಳಿಂದ ವಂಚಿತರಾಗುವುದನ್ನು ಸಹ ತಪ್ಪಿಸಬಹುದು ಎಂದರು.

ಆ್ಯಪ್ ಮೂಲಕ ಹೇಗೆ ಬೆಳೆ ದಾಖಲಿಸಬೇಕೆಂದು ರೈತರಿಗಾಗಿ ಇಲಾಖೆ ಬೆಳೆ ಸಮೀಕ್ಷೆ ಕೈಪಿಡಿ ಬಿಡುಗಡೆ ಮಾಡಿದೆ. ಇದರಿಂದ ಮಾಹಿತಿ ತಿಳಿದು ಜಮೀನುಗಳಲ್ಲಿ ನೀವು ಬೆಳೆದ ಬೆಳೆಗಳನ್ನು ಮೊಬೈಲ್ ಆ್ಯಪ್ ಮೂಲಕ ಸರಿಯಾಗಿ ಬೆಳೆ ದಾಖಲಿಸಬೇಕು. ನೀವು ದಾಖಲಿಸದಿದ್ದರೆ ಇಲಾಖೆಯಿಂದ ನಿಯೋಜಿಸಿರುವ ಪಿಆರ್‌ಗಳು (ಖಾಸಗಿ ನಿವಾಸಿಗಳು) ಬೆಳೆ ದಾಖಲಿಸಲಿದ್ದಾರೆ. ಬೆಳೆ ಮಾಹಿತಿ ದಾಖಲಿಸುವುದರಿಂದ ಸರ್ಕಾರದಿಂದ ಬೆಳೆ ಪರಿಹಾರ, ಬೆಳೆ ವಿಮೆ ಪಡೆಯಲು ಅನುಕೂಲವಾಗಲಿದೆ ಎಂದರು.

ಸರ್ಕಾರ ರೈತರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಹಿಂದಿನ ಸರ್ಕಾರ ಕೃಷಿ ಹೊಂಡಗಳನ್ನು ಕೊಡುವುದನ್ನು ಸ್ಥಗಿತಗೊಳಿಸಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಈ ಯೋಜನೆಗೆ ಚಾಲನೆ ನೀಡಿದ್ದಾರೆ. ಇದರಿಂದ ನನ್ನ ಕ್ಷೇತ್ರ ಮಳೆ ಆಧಾರಿತ ಪ್ರದೇಶ ಆಗಿದ್ದರಿಂದ ಕೃಷಿ ಹೊಂಡಗಳು ರೈತರಿಗೆ ವರದಾನವಾಗಿದೆ. ಈ ಕೃಷಿ ಹೊಂಡಗಳಿಂದ ರೈತರು ಹೈನುಗಾರಿಕೆ ಮಾಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ನಡೆಸುವ ಸಿಬ್ಬಂದಿಗೆ ಶಾಸಕ ಕೆ.ಎಸ್. ಬಸವಂತಪ್ಪ ಜಾಕೀಟ್ ವಿತರಿಸಿದರು. ಈ ವೇಳೆ ಕೃಷಿ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ, ಕೃಷಿ ಅಧಿಕಾರಿಗಳಾದ ಚಂದ್ರಪ್ಪ, ಬೀರಪ್ಪ, ಬೆಳೆ ಸಮೀಕ್ಷೆ ನಡೆಸುವ ಸಿಬ್ಬಂದಿ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

- - - -3ಕೆಡಿವಿಜಿ41.ಜೆಪಿಜಿ:

ದಾವಣಗೆರೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಬೆಳೆ ಸಮೀಕ್ಷೆ ಕೈಪಿಡಿ ಬಿಡುಗಡೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ