ಕನ್ನಡಪ್ರಭ ವಾರ್ತೆ ಕಲಬುರಗಿ
ಅವರು ಇಲ್ಲಿನ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ, ನಗರದ ನ್ಯೂ ರಾಘವೇಂದ್ರ ಕಾಲನಿಯಲ್ಲಿರುವ ಶ್ರೀ ವಿವೇಕಾನಂದ ಕೋಚಿಂಗ್ ಸೆಂಟರ್ನಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರೆಡ್ಕ್ರಾಸ್ ಸಂಸ್ಥೆ ದಿನಾಚರಣೆಯಲ್ಲಿ ಮಾತನಾಡಿದರು.
ಈ ಸಂಸ್ಥೆಯು ಶಾಂತಿ ಕಾಪಾಡುವುದು, ಗಾಯಗೊಂಡ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವುದು, ಆಕಸ್ಮಿಕ ಮರಣದ ಪ್ರಮಾಣವನ್ನು ತಗ್ಗಿಸುವುದು, ಸಮುದಾಯದ ಅಭಿವೃದ್ಧಿಯಲ್ಲಿ ತೊಡಗುವ ಮೂಲಕ ಸಬಲೀಕರಣವನ್ನು ಮಾಡುವು ಕಾರ್ಯಗಳನ್ನು ಮಾಡುತ್ತಿದೆ. ಹೆನ್ರಿ ಡ್ಯೂಯೆಟ್ ಅವರ ದೂರದೃಷ್ಠಿಯ ಫಲವೇ ಈ ಸಂಸ್ಥೆಯ ಉಗಮಕ್ಕೆ ಕಾರಣವಾಯಿತೆಂದರು.ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ ಮತ್ತು ಸಂಸ್ಥೆಯ ಮುಖ್ಯಸ್ಥ ಬಸವರಾಜ ಮಳ್ಳಿ ಮಾತನಾಡಿ, ರೆಡೆಕ್ರಾಸ್ ಸಂಸ್ಥೆಯು ಯುದ್ಧಪೀಡಿತ ಸಂದರ್ಭದಲ್ಲಿ ಕಂಡುಬರುವ ಜೀವಹಾನಿಯನ್ನು ತಪ್ಪಿಸಲು ಪ್ರಯತ್ನಿಸುತ್ತದೆ. ಇದರ ಕೊಡುಗೆ ಮರೆಯುವಂತಿಲ್ಲವೆಂದರು.
ಕಾರ್ಯಕ್ರಮದಲ್ಲಿ ಬಳಗದ ಸದಸ್ಯರಾದ ಮಹಾಂತೇಶ ಬಿರಾದಾರ, ರಾಜಕುಮಾರ ಬಟಗೇರಿ, ಬಸವರಾಜ ದೇಸಾಯಿ, ಸಹ ಶಿಕ್ಷಕರಾದ ಇಂದಿರಾ ಕಿರಣಗಿ, ಭೀಮಾಶಂಕರ ಶೇರಿ, ಮಲ್ಲಿಕಾರ್ಜುನ ಗುಡಬಾ ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.